Just In
- 35 min ago
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- 1 hr ago
ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಬಗ್ಗೆ 'ಬಿಗ್ ಬಾಸ್' ಅಕ್ಷತಾ ಪಾಂಡವಪುರ ಹೇಳಿದ್ದೇನು?
- 9 hrs ago
ಶಾರುಖ್ ಖಾನ್ ಬಂಗಲೆಯಲ್ಲಿ ವರುಣ್ ಧವನ್ ಮದುವೆ ಸಂಭ್ರಮ
- 10 hrs ago
ರಾಮ ಮಂದಿರ ನಿರ್ಮಾಣ: ಪವನ್ ಕಲ್ಯಾಣ್ ಭಾರಿ ಮೊತ್ತ ದೇಣಿಗೆ
Don't Miss!
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- News
ಭಾರತವನ್ನು ಸಂಜೀವಿನಿ ಹೊತ್ತು ತರುವ ಹನುಮಂತನಿಗೆ ಹೋಲಿಸಿದ ಬ್ರೆಜಿಲ್ ಅಧ್ಯಕ್ಷ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಭಾರತದಲ್ಲಿ ಸೆಲ್ಟೊಸ್ ಫೇಸ್ಲಿಫ್ಟ್ ಆವೃತ್ತಿಯ ಬಿಡುಗಡೆಗಾಗಿ ಸಿದ್ದವಾದ ಕಿಯಾ ಮೋಟಾರ್ಸ್
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Sports
ಭಾರತ vs ಆಸೀಸ್: ಕಾಕತಾಳೀಯ, ಕುತೂಹಲಕಾರಿ ಅಂಕಿ-ಅಂಶಗಳು!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಿಚ್ಚ ಸುದೀಪ್ ಶೀಘ್ರದಲ್ಲೇ ಕಾಂಗ್ರೆಸ್ಗೆ ಸೇರ್ಪಡೆ?
ಈ ರೀತಿಯ ಸುದ್ದಿ ಬಹಳ ದಿನಗಳಿಂದಲೂ ಕೇಳಿಬರುತ್ತಿತ್ತು. ಕಿಚ್ಚ ಸುದೀಪ್ ಚಿತ್ರರಂಗಕ್ಕೆ ವಿದಾಯ ಹೇಳಲಿದ್ದಾರಂತೆ ಹಾಗಂತೆ ಹೀಗಂತೆ ಎಂಬ ಸುದ್ದಿಗಳ ನಡುವೆಯೇ ಶೀಘ್ರದಲ್ಲೇ ರಾಜಕೀಯಕ್ಕೂ ಎಂಟ್ರಿ ಕೊಡಲಿದ್ದಾರೆ ಎಂಬುದು ಕಾಳ್ಗಿಚ್ಚಿನಂತೆ ಹಬ್ಬಿತ್ತು. ಈ ಸುದ್ದಿ ದಿಟವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸುದೀಪ್ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದಲೇ ಸುದೀಪ್ ಈಗಲೆ ತಯಾರಿ ನಡೆಸಿದ್ದಾರೆ ಎಂಬ ಮಾತುಗಳಿಗೆ ಮತ್ತಷ್ಟು ಪುಷ್ಠಿ ಬಂದಿದೆ . ಮಂಡ್ಯ ಗಂಡು, ರೆಬೆಲ್ ಸ್ಟಾರ್ ಅಂಬರೀಷ್ ಅವರ ಪರ ಪ್ರಚಾರ ಮಾಡಿದ್ದಾಗಿ ಸುದೀಪ್ ಹೇಳಿಕೊಂಡಿದ್ದಾರೆ.
ಸುದೀಪ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಈಗಾಗಲೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತುದಿಗಾಲಲ್ಲಿ ನಿಂತಿವೆ. ಸುದೀಪ್ರನ್ನು ಬಳ್ಳಾರಿಯಿಂದ ಕಣಕ್ಕಿಳಿಸಿ ರೆಡ್ಡಿ ಸಹೋದರರನ್ನು ಮಟ್ಟ ಹಾಕುವ ಐನಾತಿ ಪ್ಲಾನನ್ನು ಮಾಜಿ ಪ್ರಧಾನಿ ದೇವೇಗೌಡರು ಈ ಹಿಂದೆಯೇ ಹಾಕಿದ್ದರು. ಆದರೆ ಅದ್ಯಾಕೋ ಏನೋ ಅವರ ಪ್ಲಾನ್ ತಲೆಕೆಳಗಾಗಿತ್ತು.
ಕನ್ನಡ ಚಿತ್ರಗಳು : ನಿಮ್ಮ ಅಮೂಲ್ಯ ಮತ ಯಾರಿಗೆ?
ಬಿಜೆಪಿ ಸಹ ಸುದೀಪ್ರನ್ನು ರಾಜಕೀಯಕ್ಕೆ ಎಳೆಯುವ ಚಿಂತನೆಯಲ್ಲಿದೆ. ಆದರೆ ಸುದೀಪ್ ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ಜೈ ಎನ್ನುವ ಸಾಧ್ಯತೆಗಳು ಹೆಚ್ಚಾಗಿವೆ.ಅಂಬರೀಷ್ ತಮ್ಮ ಬೆನ್ನಿಗಿರುತ್ತಾರೆ ಎಂಬ ಲೆಕ್ಕಾಚಾರ ಸುದೀಪ್ ಅವರದು. ಆದರೆ ಈ ಬಗ್ಗೆ ಸುದೀಪ್ ಮಾತ್ರ ಏನನ್ನೂ ಹೇಳದೆ ಮೌನಕ್ಕೆ ಶರಣಾಗಿದ್ದಾರೆ.
ಬಾಲಿವುಡ್, ಟಾಲಿವುಡ್ ಸೇರಿದಂತೆ ಎಲ್ಲ ಚಿತ್ರರಂಗದ ಜನಪ್ರಿಯ ತಾರೆಗಳನ್ನೂ ಚುನಾವಣೆ ಪ್ರಚಾರಕ್ಕೆ ಬಳಸಿಕೊಳ್ಳುವುದುಂಟು. ಹಾಗೆಯೇ ಸುದೀಪ್ ಅವರನ್ನು ಬಳಸಿಕೊಂಡಿದ್ದಾರೆ. ಇದರಲ್ಲೇನು ವಿಶೇಷವಿಲ್ಲ ಬಿಡಿ ಎನ್ನುವವರೂ ಕಡಿಮೆಯಿಲ್ಲ. ಆದರೂ ಎಲ್ಲೋ ಒಂದು ಕಡೆ ಸುದೀಪ್ ರಾಜಕೀಯಕ್ಕೆ ಧುಮುಕುತ್ತಾರೆ ಎಂಬ ಗುಮಾನಿಯಂತೂ ಕಾಡುತ್ತಿದೆ. [ಸುದೀಪ್]