Just In
Don't Miss!
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಟಾಟಾ ಆಲ್ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್
- Sports
ಐಎಸ್ಎಲ್: ಪ್ಲೇ ಆಫ್ ನಿರೀಕ್ಷೆಯಲ್ಲಿ ಜೆಮ್ಷೆಡ್ಪುರ, ನಾರ್ಥ್ ಈಸ್ಟ್
- News
ಭಾರತದಲ್ಲಿ ಮೊದಲ ದಿನ ಕೊರೊನಾ ಲಸಿಕೆ ಪಡೆದವರೆಷ್ಟು ಮಂದಿ?
- Lifestyle
ಆರೋಗ್ಯಕರ ಋತುಚಕ್ರಕ್ಕೆ ಇಲ್ಲಿವೆ ಕೆಲವೊಂದು ಯೋಗಾಸನಗಳು
- Finance
ಬಜೆಟ್ 2021: MSME ವಲಯಕ್ಕೆ ಏನು ಸಿಗಬಹುದು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನೀ ಬರೆದ ಕಾದಂಬರಿ ಮಾಸ್ಟರ್ ಅರ್ಜುನ್ ಮದುವೆ
ಬಾಲ ಕಲಾವಿದನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಮಾಸ್ಟರ್ ಅರ್ಜುನ್ ಭಾನುವಾರ (ಫೆ.27) ದಾಂಪತ್ಯ ಜೀವನಕ್ಕೆ ಅಡಿಯಿಟ್ಟರು. ಬಿ ಕೆ ದಿವ್ಯಾ ಅವರನ್ನು ತಮ್ಮ ಬಾಳ ಸಂಗಾತಿಯಾಗಿ ಅರ್ಜುನ್ ಬರಮಾಡಿಕೊಂಡರು. ಇವರ ಮದುವೆ ಬೆಂಗಳೂರು ಇಂದಿರಾನಗರದ ಎನ್ ಡಿ ಕೆ ಕಲ್ಯಾಣ ಮಂಟಪದಲ್ಲಿ ನಡೆಯಿತು.
ನಟಿ ಭವ್ಯಾ ಮತ್ತು ಸಾಹಸಸಿಂಹ ವಿಷ್ಣುವರ್ಧನ್ ಮುಖ್ಯಭೂಮಿಕೆಯಲ್ಲಿರುವ 'ನೀ ಬರೆದ ಕಾದಂಬರಿ' ಚಿತ್ರದಪುಟ್ಟ ಪಾತ್ರದಲ್ಲಿ ಅರ್ಜುನ್ ಗಮನಸೆಳೆದಿದ್ದರು. ನೀ ಮೀಟಿದ ನೆನಪೆಲ್ಲವು ಎದೆ ತುಂಬಿ ಹಾಡಾಗಿದೆ ಎಂದು ಭವ್ಯಾ ಹಾಡುತ್ತಿದ್ದರೆ ಅರ್ಜುನ್ ಅಮ್ಮಾ ಅಮ್ಮಾ... ಎಂದು ಬರುವ ಹಾಡನ್ನು ಚಿತ್ರರಸಿಕರು ಇನ್ನೂ ಮರೆತಿಲ್ಲ.
'ಅಬ್ಬಬ್ಬ ಎಂಥಾ ಹುಡುಗ' ಎಂಬ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿ ಅರ್ಜುನ್ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ್ದರು. ಆ ಚಿತ್ರವನ್ನು ಅರ್ಜುನ್ ಅವರ ತಂದೆ ಅರುಣ್ ನಿರ್ಮಿಸಿದ್ದರು. ಅರ್ಜುನ್ ಅವರ ಮದುವೆಗೆ ಕನ್ನಡ ಚಿತ್ರರಂಗದ ಬಹುತೇಕ ಗಣ್ಯರು ಆಗಮಿಸಿ ನೂತನ ದಂಪತಿಗಳಿಗೆ ಹೊಸ ಬಾಳಿನ ಹೊಸಿಲಲಿ ನಿಂತಿರುವ ಹೊಸ ಜೋಡಿಗೆ ಶುಭವಾಗಲಿ ಎಂದು ಹಾರೈಸಿದರು.