Don't Miss!
- Finance ಐಪಿಎಲ್ ಬೆಟ್ಟಿಂಗ್ನಲ್ಲಿ ಇಂಜಿನಿಯರ್ಗೆ 84 ಲಕ್ಷ ರೂ. ನಷ್ಟ: ಸಾಲಗಾರರ ಕಿರುಕುಳಕ್ಕೆ ಹೆಂಡತಿ ಆತ್ಮಹತ್ಯೆ
- News ಮೂಲೆ ನಿವೇಶನ ಮಾರಾಟ ಮಾಡಲಿದೆ ಬಿಡಿಎ: ಯಾವ-ಯಾವ ಬಡಾವಣೆ?
- Lifestyle ಇಲ್ಲಿದೆ ವಿಶ್ವದ ಅತ್ಯಂತ ದುಬಾರಿ ಹಸು..! ₹40 ಕೋಟಿಗೆ ಹರಾಜು..!
- Sports CSK vs GT: ಚೆಪಾಕ್ನಲ್ಲಿ ನಡೆಯದ 'ಶುಭ' ಆಟ; ಸಿಎಸ್ಕೆ ವಿರುದ್ಧ ಮಕಾಡೆ ಮಲಗಿದ ಗುಜರಾತ್ ಟೈಟನ್ಸ್
- Automobiles ಆಕರ್ಷಕ ಬೆಲೆ: ಭಾರೀ ಬೇಡಿಕೆಯ ಕಿಯಾ ಸೆಲ್ಟೋಸ್ ಎಸ್ಯುವಿಯ ಹೊಸ ರೂಪಾಂತರಗಳು ಬಿಡುಗಡೆ
- Technology Lenovo: ಭಾರತದಲ್ಲಿ ಲೆನೊವೊ ಟ್ಯಾಬ್ M11 ಲಾಂಚ್! 8GB RAM ... ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೀ ಬರೆದ ಕಾದಂಬರಿ ಮಾಸ್ಟರ್ ಅರ್ಜುನ್ ಮದುವೆ
ಬಾಲ ಕಲಾವಿದನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಮಾಸ್ಟರ್ ಅರ್ಜುನ್ ಭಾನುವಾರ (ಫೆ.27) ದಾಂಪತ್ಯ ಜೀವನಕ್ಕೆ ಅಡಿಯಿಟ್ಟರು. ಬಿ ಕೆ ದಿವ್ಯಾ ಅವರನ್ನು ತಮ್ಮ ಬಾಳ ಸಂಗಾತಿಯಾಗಿ ಅರ್ಜುನ್ ಬರಮಾಡಿಕೊಂಡರು. ಇವರ ಮದುವೆ ಬೆಂಗಳೂರು ಇಂದಿರಾನಗರದ ಎನ್ ಡಿ ಕೆ ಕಲ್ಯಾಣ ಮಂಟಪದಲ್ಲಿ ನಡೆಯಿತು.
ನಟಿ ಭವ್ಯಾ ಮತ್ತು ಸಾಹಸಸಿಂಹ ವಿಷ್ಣುವರ್ಧನ್ ಮುಖ್ಯಭೂಮಿಕೆಯಲ್ಲಿರುವ 'ನೀ ಬರೆದ ಕಾದಂಬರಿ' ಚಿತ್ರದಪುಟ್ಟ ಪಾತ್ರದಲ್ಲಿ ಅರ್ಜುನ್ ಗಮನಸೆಳೆದಿದ್ದರು. ನೀ ಮೀಟಿದ ನೆನಪೆಲ್ಲವು ಎದೆ ತುಂಬಿ ಹಾಡಾಗಿದೆ ಎಂದು ಭವ್ಯಾ ಹಾಡುತ್ತಿದ್ದರೆ ಅರ್ಜುನ್ ಅಮ್ಮಾ ಅಮ್ಮಾ... ಎಂದು ಬರುವ ಹಾಡನ್ನು ಚಿತ್ರರಸಿಕರು ಇನ್ನೂ ಮರೆತಿಲ್ಲ.
'ಅಬ್ಬಬ್ಬ ಎಂಥಾ ಹುಡುಗ' ಎಂಬ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿ ಅರ್ಜುನ್ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ್ದರು. ಆ ಚಿತ್ರವನ್ನು ಅರ್ಜುನ್ ಅವರ ತಂದೆ ಅರುಣ್ ನಿರ್ಮಿಸಿದ್ದರು. ಅರ್ಜುನ್ ಅವರ ಮದುವೆಗೆ ಕನ್ನಡ ಚಿತ್ರರಂಗದ ಬಹುತೇಕ ಗಣ್ಯರು ಆಗಮಿಸಿ ನೂತನ ದಂಪತಿಗಳಿಗೆ ಹೊಸ ಬಾಳಿನ ಹೊಸಿಲಲಿ ನಿಂತಿರುವ ಹೊಸ ಜೋಡಿಗೆ ಶುಭವಾಗಲಿ ಎಂದು ಹಾರೈಸಿದರು.