Don't Miss!
- News ಮನೆ ಬಾಗಿಲಿಗೆ ಹೋದರೂ ಸಿಗಲಿಲ್ಲ ಬಿಜೆಪಿ ಶಾಸಕರು, ಸಂಸದರು: ಉ.ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿಗಿಲ್ಲ ಅಸಮಾಧಾನಿತರ ಬೆಂಬಲ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಂಗನಸು ಕಂಡ ಪ್ರೇಮ್ ಸಿಹಿಮುತ್ತಿನ ನಶೆಯಲ್ಲಿ
ನೆನಪಿರಲಿ ಪ್ರೇಮ್ ಎಂದೇ ಖ್ಯಾತರಾದ ಪ್ರೇಮ್ ಅವರ ನೆನಪಿರಲಿ ಚಿತ್ರದ ನಂತರ ಬಂದ ಚಿತ್ರಗಳು ಪ್ರೇಕ್ಷಕರ ನೆನಪಿನಲ್ಲಿ ಉಳಿಯಲೇ ಇಲ್ಲ. ಬಹು ನಿರೀಕ್ಷಿತ ಹೊಂಗನಸು ಹಾಗೂ ಗುಣವಂತ ಚಿತ್ರಗಳ ಸೋಲಿನಿಂದ ಚೇತರಿಸಿಕೊಳ್ಳುತ್ತಿರುವ ಪ್ರೇಮ್. ಹೊಸ ಹೆಜ್ಜೆ ಇಟ್ಟಿದ್ದಾರೆ. ಬಹು ತಾರಾಗಣದ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಲು ಒಪ್ಪಿದ್ದಾರೆ.
ಗುರುವಾರ ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಇದೇ ಮೊದಲ ಬಾರಿಗೆ ಕಾರ್ಪೊರೇಟ್ ವಲಯದ ಪರ್ಸೋನ ಪ್ರೊಡಕ್ಷನ್ ಕಂಪೆನಿ ನಿರ್ಮಿಸುತ್ತಿರುವ 'ಸಿಹಿಮುತ್ತು' ಚಿತ್ರ ಸೆಟ್ಟೇರಿತು.ಖ್ಯಾತ ಛಾಯಾಗ್ರಾಹಕ ಕಮ್ ನಿರ್ದೇಶಕ ಅಶೋಕ್ ಕಶ್ಯಪ್ ಅವರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮ್ ಅವರ ಜತೆಗೆ ಧ್ಯಾನ್ ಹಾಗೂ ಕೋಮಲ್ ನಟಿಸಲಿದ್ದಾರೆ. ಮುಂಬಯಿ ಬೆಡಗಿ ಡಿಂಪಲ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಾಗತಿಹಳ್ಳಿ ಚಂದ್ರಶೇಖರ್, ಲೇಖಕಿ ರೇಖಾ ರಾಣಿ, ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಮ್ ,ಅಶೋಕ್ ಕಶ್ಯಪ್ ಅವರು 'ಸಿಹಿಮುತ್ತು 'ಚಿತ್ರದ ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಪರ್ಸೋನಾ ಸಂಸ್ಥೆ ಪರವಾಗಿ ಸಿರೀಶ್ ಕುಮಾರ್, ನಾರಾಯಣಬಾಬು, ಪೂರ್ಣಿಮಾ ನಾರಾಯಣ್ ಮುಂತಾದವರು ಹಾಜರಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದರು.
(ದಟ್ಸ್ ಸಿನಿವಾರ್ತೆ)