Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯೋಗರಾಜ್ ಭಟ್ಟರ ಡ್ರಾಮಾದಲ್ಲಿ ರೆಬಲ್ ಸ್ಟಾರ್
'ಪರಮಾತ್ಮ' ಚಿತ್ರದ ಬಳಿಕ ಯೋಗರಾಜ್ ಭಟ್ ಕೈಗೆತ್ತಿಕೊಂಡಿರುವ 'ಡ್ರಾಮಾ' ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಯಶ್ ಮತ್ತು ರಾಧಿಕಾ ಪಂಡಿತ್ ಮುಖ್ಯಭೂಮಿಕೆಯಲ್ಲಿರುವ ಚಿತ್ರವನ್ನು 2012ರ ಮಧ್ಯಂತರದಲ್ಲಿ ತೆರೆಗೆ ತರಲು ಭಟ್ಟರು ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಏತನ್ಮಧ್ಯೆ ಚಿತ್ರದಕ್ಕೆ ರೆಬಲ್ ಸ್ಟಾರ್ ಅಂಬರೀಷ್ ಅವರು ಎಂಟ್ರಿ ಕೊಟ್ಟಿದ್ದಾರೆ. ಚಿತ್ರದಲ್ಲಿ ಅವರದು ಬಹಳ ಮುಖ್ಯವಾದ ಪಾತ್ರವಂತೆ. ಇತ್ತೀಚೆಗೆ ಅವರು ತಮ್ಮ ಎರಡು ದಿನಗಳ ಚಿತ್ರೀಕರಣವನ್ನು ಮೈಸೂರಿನಲ್ಲಿ ಮುಗಿಸಿಕೊಟ್ಟಿದ್ದಾರೆ. ಸದ್ಯಕ್ಕೆ ಅಂಬರೀಷ್ ಪಾತ್ರದ ಬಗೆಗಿನ ವಿವರಗಳನ್ನು ಭಟ್ಟರು ಗುಟ್ಟಾಗಿಟ್ಟಿದ್ದಾರೆ.
ಇನ್ನು ಚಿತ್ರದ ಮುಖ್ಯಪಾತ್ರಧಾರಿಗಳಾದ ಯಶ್ ಮತ್ತು ರಾಧಿಕಾ ವಿಚಾರಕ್ಕೆ ಬಂದರೆ. ಇವರಿಬ್ಬರೂ ಈ ಹಿಂದೆ 'ಮೊಗ್ಗಿನ ಮನಸು' ಚಿತ್ರದಲ್ಲಿ ಅಭಿನಯಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಈಗ ಇವರಿಬ್ಬರೂ ಒಟ್ಟಿಗೆ ಅಭಿನಯಿಸುತ್ತಿರುವ ಮತ್ತೊಂದು ಚಿತ್ರ 'ಡ್ರಾಮಾ'. ಚಿತ್ರದಲ್ಲಿ ಇವರಿಬ್ಬರ ಆನ್ ಸ್ಕ್ರೀನ್ ಕೆಮಿಸ್ಟ್ರಿ ಚೆನ್ನಾಗಿ ಮೂಡಿಬಂದಿ ಎಂಬ ಮಾತುಗಳು ಕೇಳಿಬರುತ್ತಿವೆ.
ಪ್ರಕಾಶ್ ರೈ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ಪೋಷಿಸುತ್ತಿದ್ದಾರೆ. 'ಮುಂಗಾರು ಮಳೆ'ಗೆ ಕ್ಯಾಮೆರಾ ಹಿಡಿದಿದ್ದ ಎಸ್ ಕೃಷ್ಣ ಛಾಯಾಗ್ರಹಣ 'ಡ್ರಾಮಾ' ಚಿತ್ರಕ್ಕಿದ್ದು ಜೊತೆಗೆ ವಿ ಹರಿಕೃಷ್ಣ ಸಂಗೀತ ಸಂಯೋಜನೆಯೂ ಇದೆ. (ಒನ್ಇಂಡಿಯಾ ಕನ್ನಡ)