Just In
Don't Miss!
- Sports
ಅಫ್ಘಾನಿಸ್ತಾನ vs ಐರ್ಲೆಂಡ್, 3ನೇ ಏಕದಿನ ಪಂದ್ಯ, Live ಸ್ಕೋರ್
- News
ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಹೆಚ್ಚಿದ ಅಪಘಾತಗಳ ಸಂಖ್ಯೆ
- Automobiles
ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್
- Finance
ಬಜೆಟ್ 2021: ಎಲೆಕ್ಟ್ರಾನಿಕ್ ಉಪಕರಣಗಳ ಮೇಲಿನ ಆಮದು ಸುಂಕ ಹೆಚ್ಚಳ?
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಟೀಲು ದುರ್ಗಾ ಪರಮೇಶ್ವರಿಗೆ ಶಿಲ್ಪಾ ಶೆಟ್ಟಿ ವಿಶೇಷ ಪೂಜೆ
ಮದುವೆಯ ಬಳಿಕ ತನ್ನ ಪತಿ ರಾಜ್ ಕುಂದ್ರಾ ಜೊತೆ ಇದೇ ಮೊದಲ ಬಾರಿಗೆ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ತವರಿಗೆ ಸೋಮವಾರ(ಮಾ.28) ಆಗಮಿಸಿದರು. ಈ ಸಂದರ್ಭದಲ್ಲಿ ಅವರು ಕಟೀಲು ದೇವಾಲಯಕ್ಕೆ ಭೇಟಿ ನೀಡಿ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಿಲ್ಪಾ ಅವರ ತಾಯಿ ಸುನಂದಾ ಶೆಟ್ಟಿ ಹಾಗೂ ಕುಟುಂಬ ಸದಸ್ಯರು ಜೊತೆಗಿದ್ದರು.
ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಶಿಲ್ಪಾ, ಟೀಂ ಇಂಡಿಯಾ ಈ ಬಾರಿಯ ವಿಶ್ವಕಪ್ ಕ್ರಿಕೆಟ್ ಗೆಲ್ಲಲಿ ಎಂದು ಶುಭ ಹಾರೈಸಿದರು. ಇದಕ್ಕೂ ಮುನ್ನ ಶಿಲ್ಪಾ ಅವರು ತಮ್ಮ ತವರುರಾದ ನಿಡ್ಡೋಡಿ ಬಳಿಯ ಮುದಲಾಡಿಗೆ ಭೇಟಿ ನೀಡಿದರು. ಅಲ್ಲಿನ ನೆರೆಹೊರೆಯರೊಂದಿಗೆ ತುಳು ಭಾಷೆಯಲ್ಲಿ ಮಾತನಾಡುತ್ತಾ ತಮ್ಮ ಹಳೆಯ ನೆನಪುಗಳಲ್ಲಿ ವಿಹರಿಸಿದ್ದು ಚೇತೋಹಾರಿ ಅನುಭವ ಎಂದಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಗೆಲ್ಲಾ ಆಗಮಿಸಿದ ಶಿಲ್ಪಾ ಪೂಜೆ ಪುನಸ್ಕಾರಗಳಲ್ಲಿ ಮೈಮರೆತಿದ್ದರು. ಸೋಮವಾರ ಮಧ್ಯಾಹ್ನ ಅವರು ಮುಂಬೈಗೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಕಟೀಲು ದೇವಾಲಯದ ಪ್ರಧಾನ ಅರ್ಚಕರಾದ ಲಕ್ಷ್ಮಿನಾರಾಯನ ಅಸ್ರಣ್ಣ ಹಾಗೂ ಅನಂತ ಪದ್ಮನಾಭ ಅಸ್ರಣ್ಣ ಅವರು ಉಪಸ್ಥಿತರಿದ್ದರು.