Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂತ್ರವಾದಿ ಪಾತ್ರದಲ್ಲಿ ಮಿಂಚಲಿರುವ ಉಮಾಶ್ರೀ
ಕನ್ನಡ ಚಿತ್ರರಂಗದ ಖ್ಯಾತ ಕಲಾವಿದೆ ಉಮಾಶ್ರೀ ಈ ಚಿತ್ರದಲ್ಲಿ ಗಮನಾರ್ಹ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈವರೆಗೂ 380ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿ ತಮ್ಮ ನಟನ ಕೌಶಲ್ಯವನ್ನು ಮೆರೆಸಿರುವ ಈ ಮೇರುನಟಿ 'ಗುಲಾಬಿ ಟಾಕೀಸ್' ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದವರು. ಇಂತಹ ಅದ್ಭುತ ಕಲಾವಿದೆಗೆ 'ಅಂತರಾತ್ಮ' ಚಿತ್ರದಲ್ಲಿನ ಪಾತ್ರ ತುಂಬ ಹಿಡಿಸಿದೆಯಂತೆ.
"ನಾನು ಇಲ್ಲಿಯವರೆಗೂ ಸಾಕಷ್ಟು ಚಿತ್ರಗಳಲ್ಲಿ, ವಿವಿಧ ಪಾತ್ರಗಳಲ್ಲಿ ಅಭಿನಯಿಸಿದ್ದರೂ ಮಂತ್ರವಾದಿಯ ಪಾತ್ರ ನಿರ್ವಹಿಸಿರಲಿಲ್ಲ. ಹಾಗಾಗಿ ಈ ಚಿತ್ರ ನನ್ನ ಮೆಚ್ಚುಗೆಗೆ ಪಾತ್ರವಾಗಿದೆ" ಎಂದು ಉಮಾಶ್ರೀ ತಿಳಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವುದ್ದರಿಂದ ಉಮಾಶ್ರೀ ಅವರ ರಾಜಕೀಯ ಕಾರ್ಯಚಟುವಟಿಕೆ ಹೆಚ್ಚಾಗಿದ್ದು ಅವರು ಅಭಿನಯಿಸಿರುವ ಭಾಗದ ಚಿತ್ರೀಕರಣವನ್ನು ಈಗಾಗಲೆ ಪೂರ್ಣಗೊಳಿಸಲಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
ಬಿ.ಶಂಕರ್ ಅವರು ಚಿತ್ರಕಥೆ ಬರೆದು ನಿರ್ಮಾಣದ ಹೊಣೆ ಹೊತ್ತಿರುವ ಈ ಚಿತ್ರಕ್ಕೆ ಸುಂದರನಾಥ್ ಸುವರ್ಣರ ಛಾಯಾಗ್ರಹಣ, ಗಿರಿಧರ್ ದಿವಾನ್ ಸಂಗೀತ, ವಿ.ಮನೋಹರ್, ಚೇತನ್, ಆರ್ಯ ಗೀತರಚನೆ, ಶ್ರೀ ಸಂಕಲನ, ಮಂಜುನಾಥ್ ಸಂಭಾಷಣೆ, ಹೊಸ್ಮನೆ ಮೂರ್ತಿ ಕಲೆ, ಚಿನ್ನಿಪ್ರಕಾಶ್ ನೃತ್ಯವಿದೆ. ರಾಮಣ್ಣನವರ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಮಿಥುನ್ ತೇಜಸ್ವಿ, ವಿಶಾಖಾ ಸಿಂಗ್(ಬಾಂಬೆ), ರೋಹನ್ ಗೌಡ, ಸುಮನ್ ರಂಗನಾಥ್, ಉಮಾಶ್ರೀ, ಹರೀಶ್ ರಾಯ್, ಮೈಕಲ್ ಮಧು, ರೇಖಾದಾಸ್ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಸಿನಿವಾರ್ತೆ)