twitter
    For Quick Alerts
    ALLOW NOTIFICATIONS  
    For Daily Alerts

    ಮೂಡಲ ಮನೆಯಲ್ಲೀಗ ನೀರವ ಮೌನ

    By Rajendra
    |

    Vaishali Kasaravalli
    ಬಾಳ ಬದುಕಿನ ಪಯಣ ಮುಗಿಸಿದ ಹಿರಿಯ ನಟಿ, ರಂಗಭೂಮಿ ಕಲಾವಿದೆ ವೈಶಾಲಿ ಕಾಸರವಳ್ಳಿ ಅವರ ಅಂತ್ಯಕ್ರಿಯೆ ಇಂದು ಬನಶಂಕರಿ ಚಿತಾಗಾರದಲ್ಲಿ ನೆರವೇರಿತು. ಪಂಚ ಭೂತಗಳಲ್ಲಿ ಮುತ್ತಿನ ತೋರಣ ಲೀನವಾಯಿತು. ಮೂಡಲ ಮನೆಯಲ್ಲೀಗ ನೀರವ ಮೌನ.

    ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ವೈಶಾಲಿ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿತ್ತು. ಟ್ರಾಫಿಕ್ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಬನಶಂಕರಿ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿತ್ತು. ಅಂತ್ಯಕ್ರಿಯೆಗೂ ಮುನ್ನ ಮಧ್ಯಾಹ್ನ 12 ಗಂಟೆಯಿಂದ ಸಂಜೆ 3 ಗಂಟೆಯವರೆಗೂ ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ವೈಶಾಲಿ ಅವರ ಭೌತಿಕ ಕಾಯವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು.

    ಚಲನಚಿತ್ರವನ್ನು ನಿರ್ದೇಶಿಸಬೇಕು ಎಂದು ಅಪಾರ ತುಡಿತ ಹೊಂದಿದ್ದ ವೈಶಾಲಿ ಅವರು ಖ್ಯಾತ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರ 'ನಿರಾಕರಣ' ಕಾದಂಬರಿಯನ್ನು ತೆರೆಗೆ ತರುವ ಸನ್ನಾಹದಲ್ಲಿದ್ದರು. ಆದರೆ ಕನಸು ನನಸಾಗುವ ಮುನ್ನವೇ ಅವರು ಚಿರನಿದ್ರೆಗೆ ಜಾರಿದ್ದಾರೆ.

    Tuesday, September 28, 2010, 18:14
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X