Don't Miss!
- News Lok Sabha Election 2024: ಟಿಕೆಟ್ ಹಂಚಿಕೆಯ ಬಳಿಕ ಬಿಜೆಪಿಯ ಮುಂದೆ ಹೊಸ-ಹೊಸ ಸವಾಲುಗಳು
- Automobiles ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಗಸ್ಟ್ ನಲ್ಲಿ ರಾಜ್ಯದಾದ್ಯಂತ ವರ್ಷಧಾರೆ
ಆಕ್ಟಿವ್ ಫಿಲಂಸ್ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ವರ್ಷಧಾರೆ' ಚಿತ್ರ ಬಾಲಾಜಿ ಡಿಜಿಟಲ್ ಸ್ಟೂಡಿಯೋದಲ್ಲಿ ಡಿ.ಟಿ.ಎಸ್ನಿಂದ ಅಲಂಕೃತವಾಗುತ್ತಿದೆ ಎಂದು ನಿರ್ದೇಶಕ ವೇಮಗಲ್ ಜಗನ್ನಾಥ್ರಾವ್ ತಿಳಿಸಿದ್ದಾರೆ.
ವರುಣ ಈಗಾಗಲೇ ಕರುನಾಡಿನಾದ್ಯಂತ ವರ್ಷಧಾರೆ ಸುರಿಸುತ್ತಿದ್ದಾನೆ. ಆದರೆ ಪಿ.ರಾಮಸ್ವಾಮಿ ಹಾಗೂ ಸಂಧ್ಯಾ ವೆಂಕಟೇಶ್ ನಿರ್ಮಿಸುತ್ತಿರುವ 'ವರ್ಷಧಾರೆ' ಮುಂದಿನ ತಿಂಗಳಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ.ಈವರೆಗೂ ಹಲವು ಚಿತ್ರಗಳನ್ನು ನಿರ್ದೇಶಿಸಿ ಅನುಭವ ಹೊಂದಿರುವ ವೇಮಗಲ್ ಜಗನ್ನಾಥ್ರಾವ್ ಈ ಪ್ರೇಮ ಕಥಾನಕವನ್ನು ನಿರ್ದೇಶಿಸುತ್ತಿದ್ದಾರೆ.
'ವರ್ಷಧಾರೆ' ಚಿತ್ರ ಉತ್ತಮವಾಗಿ ಮೂಡಿ ಬಂದಿದೆ ಹಾಗೂ ಎಲ್ಲಾ ವರ್ಗದ ಪ್ರೇಕ್ಷಕರಿಗೂ ಈ ಚಿತ್ರ ಮೆಚ್ಚಿಗೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ವೇಮಗಲ್ ಜಗನ್ನಾಥರಾವ್ ವೆಂಕಟೇಶ್ ಅವರೊಡಗೂಡಿ ಚಿತ್ರಕ್ಕೆ ಕತೆಯನ್ನೂ ರಚಿಸಿದ್ದಾರೆ.
ದೇವರಾಜ್ ಛಾಯಾಗ್ರಹಣವಿರುವ 'ವರ್ಷಧಾರೆ'ಗೆ ಅಜನೀಶ್ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ಮಿಥುನ್ತೇಜಸ್ವಿ, ಸೂರಜ್, ಪಾಯಲ್ಘೋಷ್, ಆಶಿಟ್ಯಾಗೂರ್, ರಾಂಪ್ರಸಾದ್, ಸಂತೋಷ್, ನಿಶಾ ಮುಂತಾದವರು ಚಿತ್ರದ ತಾರಾಬಳಗದಲಿದ್ದಾರೆ.
(ದಟ್ಸ್ ಕನ್ನ್ನಡ ಚಿತ್ರವಾರ್ತೆ)