Don't Miss!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೆಗಾ ಸ್ಟಾರ್ ಚಿರಂಜೀವಿ ಚಿತ್ರನಿರ್ದೇಶಿಸುವ ಯೋಗ!
ಅವರೇ ಹೇಳುವ ಪ್ರಕಾರ ಯೋಗರಾಜ ಭಟ್ಟರು ಯಾರೂ ನಂಬಲಾರದಂಥ ಸಾಹಸಗಳಿಗೆ ಕೈ ಹಾಕುತ್ತಿದ್ದಾರೆ. ಅವುಗಳಲ್ಲಿ ಒಂದು ಸ್ಯಾಂಪಲ್ಲು: ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಚಿತ್ರವನ್ನು ನಿರ್ದೇಶಿಸುವುದು!
ಇದು ನಿಜವೇ? ಸ್ವತಃ ಯೋಗರಾಜ ಭಟ್ಟರು ಉತ್ತರಿಸುತ್ತಾರೆ: "ನಿಮ್ಮಾಣೆಗೂ ನಿಜ. ಇಂಥದ್ದೊಂದು ಆಫರ್ ಬಂದಾಗ ನಂಬಲಾಗಲಿಲ್ಲ. ಆದರೆ ಚಿರಂಜೀವಿಯವರಿಗೆ ತೀರಾ ಆಪ್ತರಾದ ಅಶ್ವಿನಿದತ್ ಅವರು ಆಫರ್ ನೀಡಿದಾಗ ನಂಬದಿರುವುದಾದರೂ ಹೇಗೆ ಸಾಧ್ಯ ನೀವೇ ಹೇಳಿ?" ಎಂದು ನಗುತ್ತಾರೆ ಭಟ್ಟರು.
ಆದರೆ ಭಟ್ಟರಿಗೆ ತಮ್ಮದೇ ಆದ ಆತಂಕವಿದೆ, ಜೊತೆಗೆ ಭಯವೂ ಇದೆ. "ಏಕೆಂದರೆ ಒಂದರ್ಥದಲ್ಲಿ ಚಿರಂಜೀವಿ ತನ್ನದೇ ಇಮೇಜ್ ಬೆಳೆಸಿಕೊಂಡಿರುವ ನಟ. ಇಂಥ ನಟನಿಗೆ ಹೀಗೆ ಮಾಡು ಅಂತ ನಿರ್ದೇಶನ ನೀಡುವುದು ನನ್ನಿಂದಾಗುವ ಕೆಲಸವಾ? ಇಷ್ಟಕ್ಕೂ ಅವರ ಇಮೇಜ್ ಗೆ ತಕ್ಕುದಾದ ಕಥೆ ಹುಡುಕಬೇಕು. ನಿರ್ದೇಶನ ನೀಡಬೇಕು. ಹೊಸಬರಾದರೆ ಹೇಗೆ ಬೇಕಾದರೂ ನಿರ್ದೇಶಿಸಬಹುದು. ಆದರೆ ಒಂದು ಇಮೇಜ್ ಬೆಳೆಸಿಕೊಂಡಿರುವ ಮಹಾ ನಟರ ಬಗ್ಗೆ ಹೀಗೆ ಎಂದು ಹೇಳಲಾಗದು" ಎಂದು ಹೇಳಿ ತಮ್ಮ ಆತಂಕವನ್ನು ವ್ಯಕ್ತಪಡಿಸುತ್ತಾರೆ ಯೋಗರಾಜಭಟ್ಟರು.
ಆದರೂ ಅಶ್ವಿನಿದತ್ ಅವರ ಕಡೆಯಿಂದ ಒತ್ತಡ ಹೆಚ್ಚುತ್ತಿದೆ. 'ಗಾಳಿಪಟ' ಬಿಟ್ಟಾಗಿದೆ. ಮುಂದೇನು? ಚಿರಂಜೀವಿ ಚಿತ್ರನಾ? ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆಪಡೆದು ಹಿಂತಿರುಗಿದ ಬಳಿಕ ಭಟ್ಟರ ಮುಂದಿನ ಹೆಜ್ಜೆಗಳನ್ನು ನೋಡುವಾ.
ಕೊನೆ ಸಿಡಿ: ಮುಂಗಾರುಮಳೆಯ ಸೂಪರ್ ಡೂಪರ್ ಯಶಸ್ಸು , ಗಾಳಿಪಟದ ಸೂಪರ್ ಯಶಸ್ಸುಗಳು ಎಲ್ಲೋ ಇದ್ದ ಯೋಗರಾಜ ಭಟ್ಟರನ್ನು ಕೀರ್ತಿ ಶಿಖರಕ್ಕೆ ಏರಿಸಿದೆ.ಅವರಿಗೆ ಇನ್ನಷ್ಟು ಕೀರ್ತಿಗಳು ದಕ್ಕಲಿ. ಆದರೆ, ಕೀರ್ತಿ ಶನಿಯನ್ನು ಹೆಗಲಿಗೇರಿಸಿಕೊಂಡು ತಿರುಗುವ ಸಾಹಸದಲ್ಲಿ ಭಟ್ಟರು ಮುಗ್ಗರಿಸದಿರಲಿ. ಇಲ್ಲಾದರೆ ಕೈ ಹಿಡಿದು ಎತ್ತುವುದಕ್ಕೆ ಜನ ಸಿಕ್ಕರೂ ಸಿಕ್ಕಾರು. ಅಲ್ಲಿಗೆ ಹೋಗಿ ಅವಲಕ್ಷಣ ಅನ್ನಿಸಿಕೊಂಡರೆ ಏಮ್ ಚೇಷೇದಿ? ಬಾಬುಗಾರು, ಮೀರು ಏಮಂಟಾರು ?