Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿಲ್ಲ; ರಮ್ಯಾ
ಗೋಲ್ಡನ್ ಗರ್ಲ್ ರಮ್ಯಾ ತಾವು ಎರಡು ದೋಣಿಗಳಲ್ಲಿ ಪಯಣಿಸುತ್ತಿಲ್ಲ. ತಮ್ಮ ಪಯಣ ಏನಿದ್ದರೂ ಒಂದೇ ದೋಣಿಯಲ್ಲಿ ಸಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ಕಡೆ ಚಿತ್ರರಂಗ ಮತ್ತೊಂದು ಕಡೆ ರಾಜಕೀಯ ಎಂದು ಎರಡೂ ರಮ್ಯಾ ಗುರುತಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಮ್ಯಾ ಚಿತ್ರರಂಗ ತೊರೆಯಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.
ತಾವು ಯಾವುದೇ ಕಾರಣಕ್ಕೂ ಚಿತ್ರರಂಗ ಬಿಡುವುದಿಲ್ಲ ಎಂದು ರಮ್ಯಾ ಸ್ಪಷ್ಟಪಡಿಸಿದ್ದಾರೆ. ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತಾನು ಸ್ಪರ್ಧಿಸುತ್ತಿದ್ದೇನೆ ಎಂಬ ಮಾತು ಸತ್ಯಕ್ಕೆ ದೂರವಾದದ್ದು ಎಂದಿದ್ದಾರೆ. ಸದ್ಯಕ್ಕೆ ತಾವು ಎರಡು ಕನ್ನಡ ಚಿತ್ರಗಳಲ್ಲಿ ಬ್ಯುಸಿಯಾಗಿದ್ದೇವೆ. ಒಂದು 'ಸಿದ್ಲಿಂಗು' ಹಾಗೂ ಮತ್ತೊಂದು 'ಲಕ್ಕಿ' ಚಿತ್ರ.
'ಸಿದ್ಲಿಂಗು' ಚಿತ್ರದಲ್ಲಿ ತಮ್ಮದು ಮಂಗಳ ಟೀಚರ್ ಪಾತ್ರ. ಚಿತ್ರದಲ್ಲಿ ಗ್ಲಾಮರ್ಗೆ ಹೆಚ್ಚು ಒತ್ತು ಇಲ್ಲದಿದ್ದರೂ ಎಮೋಷನಲ್, ಹಾಸ್ಯ, ಸೆಂಟಿಮೆಂಟ್ ಪ್ರಧಾನವಾಗಿದೆ. ಒಂದೇ ಶೆಡ್ಯೂಲ್ನಲ್ಲಿ ಚಿತ್ರವನ್ನು ಮುಗಿಸಬೇಕಾಗಿದೆ. ವಿಜಯ ಪ್ರಸಾದ್ ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕ ನಟ ಲೂಸ್ ಮಾದ ಯೋಗೇಶ್.
ಇನ್ನು 'ಲಕ್ಕಿ' ಚಿತ್ರ ಇಂಟರೆಸ್ಟಿಂಗ್ ಆಗಿದ್ದು, ಚಿತ್ರದಲ್ಲಿ ಹೀರೋ ಹೆಸರು ಲಕ್ಕಿ. ಅವನು ಇನ್ನೇನು ಲವ್ ಪ್ರಪೋಸ್ ಮಾಡಬೇಕು ಅನ್ನುವಷ್ಟರಲ್ಲಿ ನಾಯಿ ಅಡ್ಡಬರುತ್ತದೆ. ಅಲ್ಲಿಂದ ಚಿತ್ರ ಕಾಮಿಡಿ ಹೊರಳುತ್ತದೆ. ಡಾ.ಸೂರಿ ಚಿತ್ರದ ನಿರ್ದೇಶಕ. ಗೌಸ್ ಪೀರ್ ಅವರ ಕತೆ, ಚಿತ್ರಕತೆ ಹಾಗೂ ಸಂಭಾಷಣೆ ಲಕ್ಕಿ ಚಿತ್ರಕ್ಕಿದೆ.(ದಟ್ಸ್ಕನ್ನಡ ಸಿನಿವಾರ್ತೆ)