Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿಗಳ ಸಂಭ್ರಮದಲ್ಲಿ ಸೊರಗಿದ ಅಂಬಿ
ಮಂಡ್ಯ ಲೋಕಸಭೆ ಚುನಾವಣೆಯಲ್ಲಿನ ಸೋಲುಅಂಬಿಯ 58ನೇ ಹುಟ್ಟುಹಬ್ಬವನ್ನು ಒಂಚೂರು ಮಂಕಾಗಿಸಿತ್ತು. ಮಂಡ್ಯದಲ್ಲಿನ ಸೋಲು ಅವರನ್ನು ನಿಜಕ್ಕೂ ಕಂಗೆಡಿಸಿದೆ. ಹಾಗಾಗಿ ಅಂಬರೀಷ್ ಮುಖದಲ್ಲಿ ಹುಟ್ಟುಹಬ್ಬದ ಸಂಭ್ರಮ ಇಲ್ಲ ಎನ್ನುತ್ತಾರೆ ಅವರ ಆಪ್ತ ನಿರ್ದೇಶಕರೊಬ್ಬರು. ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಸಮ್ಮುಖದಲ್ಲಿ ಅಂಬರೀಷ್ ಆಚರಿಸಿಕೊಂಡರು. ಅಂಬಿ ಅಭಿಮಾನಿಗಳು ಇಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದರು.
ಸಣ್ಣಪುಟ್ಟ ಪಾತ್ರಗಳಿಂದ ತಮ್ಮ ವೃತ್ತಿ ಜೀವನವನ್ನು ಅರಂಭಿಸಿದ ಅಂಬರೀಷ್ ಅವರಿಗೆ ತಿರುವು ಕೊಟ್ಟಂತಹ ನಿರ್ದೇಶಕರು ಪುಟ್ಟಣ್ಣ ಕಣಗಾಲ್. ಪಡುವಾರಹಳ್ಳಿ ಪಾಂಡವರು, ಶುಭಮಂಗಳ, ರಂಗನಾಯಕಿ ಸೇರಿದಂತೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಂಬರೀಷ್ ಅಭಿನಯಿಸಿದ್ದಾರೆ. 'ಅಂತ' ಚಿತ್ರದಲ್ಲಿನ ಕನ್ವರ್ ಲಾಲ್ ಪಾತ್ರ, ಚಕ್ರವ್ಯೂಹ, ಏಳು ಸುತ್ತಿನ ಕೋಟೆ ,ಹಾಂಕಾಂಗ್ ನಲ್ಲಿ ಏಜೆಂಟ್ ಅಮರ್, ಒಡ ಹುಟ್ಟಿದವರು ಚಿತ್ರಗಳಲ್ಲಿನ ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದವರು ಅಂಬರೀಷ್.
(ದಟ್ಸ್ ಕನ್ನಡ ಚಿತ್ರವಾರ್ತೆ)