Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆನ್ಸಾರ್ ನಲ್ಲಿ ಗುಂಡ್ರಗೋವಿ ಪಾಸು
ಸುದರ್ಶನ್ ಕ್ರಿಯೇಷನ್ಸ್ ಲಾಂಛನದಲ್ಲಿ ಟಿ.ಎನ್. ಗೋಪಾಲಕೃಷ್ಣ ನಿರ್ಮಿಸುತ್ತಿರುವ ಗುಂಡ್ರಗೋವಿ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ದೊರೆತಿದ್ದು, ಏಪ್ರಿಲ್ ತಿಂಗಳ 3ನೇ ವಾರದಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಕು ಸಕಲ ಸಿದ್ಧತೆಗಳು ನಡೆಯುತ್ತಿವೆ. ಚಿಕ್ಕಮಗಳೂರು ಜಿಲ್ಲೆಯ ಇಂದಾವರ, ಮತ್ತಾವರ ಗ್ರಾಮಗಳಲ್ಲಿ ಮಾತಿನ ಭಾಗ ಹಾಗೂ ರಾಜ್ಯದ ರಮಣೀಯ ತಾಣಗಳಲ್ಲಿ ಹಾಡುಗಳನ್ನು ಚಿತ್ರೀಕರಿಸಲಾಗಿದೆ.
ಆ ದಿನಗಳು ಚಿತ್ರದಲ್ಲಿ ಸರ್ದಾರ ಪಾತ್ರದಿಂದ ಜನಮನ ಸೂರೆಗೊಂಡಿದ್ದ ಸತ್ಯ ಈ ಚಿತ್ರದ ನಾಯಕ ಪಾತ್ರ ನಿರ್ವಹಿಸಿದ್ದಾರೆ. ಹಳ್ಳಿಯಲ್ಲಿ ಪೋಲಿಯಾಗಿ ಅಲೆಯುತ್ತ ಗುಂಡ್ರಗೋವಿ ಎನಿಸಿಕೊಂಡಿದ್ದ ನಾಯಕನ ವಿಶೇಷತೆಗಳೇನು ಎಂಬುದನ್ನು ನಿರ್ದೇಶಕ ಎಂ.ಜಿ. ತಾರೇಶ್ ಬಾಬು ತುಂಬಾ ಅದ್ಭುತವಾಗಿ ನಿರೂಪಿಸಿದ್ದಾರೆ.
ಕಳೆದ ವಾರ ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರವನ್ನು ಮೆಚ್ಚುಕೊಂಡು ಯಾವುದೇ ಕಟ್ ಇಲ್ಲದೆ ಯು/ಎ ಪ್ರಮಾಣ ಪತ್ರ ನೀಡಿದ್ದಾರೆ. ನಿರಂಜನ ಬಾಬುರವರ ಛಾಯಾಗ್ರಹಣ, ಫೀನಿಕ್ಸ್ ರಾಜನ್ ಅವರ ಸಂಗೀತ ಸಂಯೋಜನೆ ಇರುವ ಚಿತ್ರದ ತಾರಾಬಳಗದಲ್ಲಿ ಸತ್ಯ, ನವ್ಯಶ್ರೀ, ಶರತ್ ಲೋಹಿತಾಶ್ವ, ನೀನಾಸಂ ಅಶ್ವತ್ಥ್, ಆಶಾಲತಾ, ಶರಣ್, ಮೊದಲಾದವರಿದ್ದಾರೆ.