Don't Miss!
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಂಧಿಜಯಂತಿಗೆ ನವಿರಾದ ಪ್ರೇಮಕಥೆ 'ಜಾಲ'
ಜೋಶಿಸ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ 'ಜಾಲ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ನಿರ್ಮಾಪಕ ನರಸಿಂಹ ಜೋಶಿ ತಿಳಿಸಿದ್ದಾರೆ. ಖ್ಯಾತ ನಿರ್ದೇಶಕ ಟಿ.ಎನ್.ಸೀತಾರಾಂ ಅವರ ಬಳಿ ಸಹಾಯಕರಾಗಿದ್ದ ನಾಗನಾಥ ಜೋಶಿ ಹಲವು ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.
ನವಿರಾದ ಪ್ರೇಮಕಥೆಯೊಂದಿಗೆ ಕುತೂಹಲಭರಿತ ಸನ್ನಿವೇಶಗಳು ಚಿತ್ರದಲ್ಲಿದ್ದು, ನೋಡುಗರ ಪ್ರಶಂಸೆಗೆ 'ಜಾಲ' ಪಾತ್ರವಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಬೆಂಗಳೂರು, ಶಿರಸಿ ಹಾಗೂ ಸುತ್ತಲ್ಲಿನ ಸುಂದರ ಪರಿಸರದಲ್ಲಿ ಚಿತ್ರೀಕರಣಗೊಂಡಿರುವ 'ಜಾಲ' ಚಿತ್ರಕ್ಕೆ ನಿರ್ದೇಶಕರೇ ಕತೆ, ಚಿತ್ರಕತೆ ಬರೆದಿದ್ದಾರೆ.
ಚಂದ್ರು ಬೆಳವಂಗಲ ಛಾಯಾಗ್ರಹಣ, ಮದನ್ ಮೋಹನ್ ಸಂಗೀತ, ರಾಜಶೇಖರ್ ಹೆಗಡೆ ಸಂಭಾಷಣೆ, ಶ್ರೀಕಾಂತ್ ತೆಂಗಿನತೋಟ ಸಂಕಲನ, ನಾಗನಾಥ ಜೋಶಿ, ರಾಜಶೇಖರ ಹೆಗಡೆ, ಮೋಹನ್ ಗೀತರಚನೆ, ಅಲ್ಟಿಮೆಟ್ ಶಿವು ಸಾಹಸ, ಕಪಿಲ್ ನೃತ್ಯ, ಬಾಬುಖಾನ್ ಕಲೆ, ಸತೀಶ್ ಸಹನಿರ್ದೇಶನ, ಶಿವಕುಮಾರ್ ನಿರ್ಮಾಣನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಚೇತನ್, ದೀಪು, ಪದ್ಮಿನಿ, ಪೂರ್ವಿ, ಅರವಿಂದ್ಶ್ರೀನಿವಾಸ್, ದಿನೇಶ್ ನಾಯಕ್, ಮಮತಾ, ಮಾರಿಮುತ್ತು, ಪ್ರಣವಮೂರ್ತಿ, ರಂಗನಾಥ್ ಹಾಗೂ ಮಿಲ್ಟ್ರಿ ಮಂಜು ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)