Don't Miss!
- News ಕ್ವಿಟ್ ಎನ್ಡಿಎ ಮತ್ತು ಸೇವ್ ಇಂಡಿಯಾ: ಪ್ರೊ. ಮಹೇಶ್ಚಂದ್ರಗುರು
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಂಧಿಜಯಂತಿಗೆ ನವಿರಾದ ಪ್ರೇಮಕಥೆ 'ಜಾಲ'
ಜೋಶಿಸ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ 'ಜಾಲ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ನಿರ್ಮಾಪಕ ನರಸಿಂಹ ಜೋಶಿ ತಿಳಿಸಿದ್ದಾರೆ. ಖ್ಯಾತ ನಿರ್ದೇಶಕ ಟಿ.ಎನ್.ಸೀತಾರಾಂ ಅವರ ಬಳಿ ಸಹಾಯಕರಾಗಿದ್ದ ನಾಗನಾಥ ಜೋಶಿ ಹಲವು ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.
ನವಿರಾದ ಪ್ರೇಮಕಥೆಯೊಂದಿಗೆ ಕುತೂಹಲಭರಿತ ಸನ್ನಿವೇಶಗಳು ಚಿತ್ರದಲ್ಲಿದ್ದು, ನೋಡುಗರ ಪ್ರಶಂಸೆಗೆ 'ಜಾಲ' ಪಾತ್ರವಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಬೆಂಗಳೂರು, ಶಿರಸಿ ಹಾಗೂ ಸುತ್ತಲ್ಲಿನ ಸುಂದರ ಪರಿಸರದಲ್ಲಿ ಚಿತ್ರೀಕರಣಗೊಂಡಿರುವ 'ಜಾಲ' ಚಿತ್ರಕ್ಕೆ ನಿರ್ದೇಶಕರೇ ಕತೆ, ಚಿತ್ರಕತೆ ಬರೆದಿದ್ದಾರೆ.
ಚಂದ್ರು ಬೆಳವಂಗಲ ಛಾಯಾಗ್ರಹಣ, ಮದನ್ ಮೋಹನ್ ಸಂಗೀತ, ರಾಜಶೇಖರ್ ಹೆಗಡೆ ಸಂಭಾಷಣೆ, ಶ್ರೀಕಾಂತ್ ತೆಂಗಿನತೋಟ ಸಂಕಲನ, ನಾಗನಾಥ ಜೋಶಿ, ರಾಜಶೇಖರ ಹೆಗಡೆ, ಮೋಹನ್ ಗೀತರಚನೆ, ಅಲ್ಟಿಮೆಟ್ ಶಿವು ಸಾಹಸ, ಕಪಿಲ್ ನೃತ್ಯ, ಬಾಬುಖಾನ್ ಕಲೆ, ಸತೀಶ್ ಸಹನಿರ್ದೇಶನ, ಶಿವಕುಮಾರ್ ನಿರ್ಮಾಣನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಚೇತನ್, ದೀಪು, ಪದ್ಮಿನಿ, ಪೂರ್ವಿ, ಅರವಿಂದ್ಶ್ರೀನಿವಾಸ್, ದಿನೇಶ್ ನಾಯಕ್, ಮಮತಾ, ಮಾರಿಮುತ್ತು, ಪ್ರಣವಮೂರ್ತಿ, ರಂಗನಾಥ್ ಹಾಗೂ ಮಿಲ್ಟ್ರಿ ಮಂಜು ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)