Don't Miss!
- News ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ನಾಯಕನೇ ಇಲ್ಲ: ಪ್ರಧಾನಿ ಮೋದಿ!
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫೇಸ್ಬುಕ್ನಲ್ಲಿ ಕತ್ತಿ ಝಳಪಿಸಿದ ಚಾಲೆಂಜಿಂಗ್ ಸ್ಟಾರ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣ ಫೇಸ್ಬುಕ್ಗೆ ಲಗ್ಗೆ ಹಾಕಿ ಕತ್ತಿ ಝಳಪಿಸಿದ್ದಾರೆ. ದರ್ಶನ್ ವರಸೆಗೆ ಅವರ ಶತ್ರುಗಳು ಬೆಚ್ಚಬೀಳುವಂತಿದೆ. ಆದರೆ ದರ್ಶನ್ ಕತ್ತಿ ಬೀಸಿರುವುದು ನಿಜವಾಗಿಯೂ ಅಲ್ಲ. ಇದು 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ವರಸೆ. 'ರಾಯಣ್ಣ' ಚಿತ್ರೀಕರಣ ವಿವರಗಳು ಬೇಕಿದ್ದರೆ ನೀವೂ ಫೇಸ್ಬುಕ್ಗೆ ಲಗ್ಗೆ ಹಾಕಿ ನೋಡಿ.
ಐತಿಹಾಸಿಕ ಚಿತ್ರವಾಗಿರುವ ಸಂಗೊಳ್ಳಿ ರಾಯಣ್ಣ ಚಿತ್ರದ ವಿವರಗಳು ಫೇಸ್ಬುಕ್ಗೆ ಹಾಕುವ ಮೂಲಕ ದರ್ಶನ್ ತಮ್ಮ ಅಭಿಮಾನಿಗಳಿಗೆ ಇನ್ನೂ ಹತ್ತಿರವಾಗಿದ್ದಾರೆ. ಆದರೆ ಸಂಗೊಳ್ಳಿ ರಾಯಣ್ಣ ಫೇಸ್ಬುಕ್ ಅಕೌಂಟ್ ಬಗ್ಗೆ ಇನ್ನೂ ಹೆಚ್ಚಿನ ಮಂದಿ ಅಭಿಮಾನಿಗಳಿಗೆ ಮಾಹಿತಿ ಇಲ್ಲದಿರುವುದರಿಂದ ಅಭಿಮಾನಿಗಳ ಕಲರವ ಅಷ್ಟಾಗಿ ಇಲ್ಲಿ ಕಾಣಸಿಗುವುದಿಲ್ಲ.
'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಚಿತ್ರದ ಪೋಸ್ಟರ್ಗಳು ಒಂದಕ್ಕಿಂತ ಒಂದು ಅದ್ಭುತವಾಗಿ ಮೂಡಿಬಂದಿದ್ದು ಅಂತಾರಾಷ್ಟ್ರೀಯ ಪೋಸ್ಟರ್ ಪ್ರಶಸ್ತಿಯೂ ಲಭಿಸಿದೆ. ನಾಗಣ್ಣ ಆಕ್ಷನ್ ಕಟ್ ಹೇಳುತ್ತಿರುವ ಚಿತ್ರಕ್ಕೆ ಕೇಶವಾದಿತ್ಯ ಕತೆ, ಚಿತ್ರಕತೆ ರಚಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟನಾದ ಸಂಗೊಳ್ಳಿ ರಾಯಣ್ಣ ಅಪ್ರತಿಮ ಯೋಧ. ಬ್ರಿಟೀಷರ ವಿರುದ್ಧ ಹೋರಾಡಿ ಅವರಲ್ಲಿ ನಡುಕ ಹುಟ್ಟಿಸಿದ ಸಾಹಸಿ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿರುವ ಗಣೇಶವಾಡಿ ಗ್ರಾಮವು ಸಂಗೊಳ್ಳಿ ರಾಯಣ್ಣನ ತಾಯಿ ಕೆಂಚವ್ವನ ತವರುಮನೆ. ಅಲ್ಲಿಯೆ ಸಂಗೊಳ್ಳಿ ರಾಯಣ್ಣನು ಜನಿಸಿದನು. ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಚನ್ನಮ್ಮ ಹಾಗು ರಾಯಣ್ಣ ಇಬ್ಬರೂ ಸೆರೆಯಾಳಾದರು. ಬ್ರಿಟಿಷರು ಚನ್ನಮ್ಮನನ್ನು ಬೈಲಹೊಂಗಲದಲ್ಲಿ ಸೆರೆಯಲ್ಲಿಟ್ಟರು. ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದರು. (ಒನ್ಇಂಡಿಯಾ ಕನ್ನಡ)