Don't Miss!
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಲಾರಿಯಲ್ಲಿ ಗುರು ಪ್ರಸಾದ್, ಸುರೇಶ್ ಹೆಬ್ಳಿಕರ್
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಮೈಲಾರಿ' ಚಿತ್ರಕ್ಕೆ ಬೆಂಗಳೂರು ನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಆರ್.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀನಿವಾಸ್ ಅವರು ಅರ್ಪಿಸಿ ಕೆ.ಪಿ.ಶ್ರೀಕಾಂತ್ ನಿರ್ಮಿಸುತ್ತಿರುವ ಚಿತ್ರ ಇದಾಗಿದೆ.
ನಾಯಕ ಶಿವರಾಜ್ಕುಮಾರ್, ಸಂಜನಾ, ಗುರುಪ್ರಸಾದ್(ಮಠ) ಹಾಗೂ ಸುರೇಶ್ಹುಬ್ಳಿಕರ್ ಅಭಿನಯಿಸಿದ ಸನ್ನಿವೇಶಗಳನ್ನು ನಿರ್ದೇಶಕ ಆರ್.ಚಂದ್ರು ನಗರದ ಅರಗಿಣಿ ಪತ್ರಿಕಾ ಕಛೇರಿಯಲ್ಲಿ ಚಿತ್ರೀಕರಿಸಿಕೊಂಡರು. 'ತಾಜ್ಮಹಲ್', 'ಪ್ರೇಮ್ಕಹಾನಿ' ಚಿತ್ರಗಳ ನಂತರ ಆರ್.ಚಂದ್ರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ವಿಭಿನ್ನ ಕಥೆಯುಳ್ಳ ಈ ಚಿತ್ರ ನೊಡುಗರ ಮನಸೂರೆಗೊಳ್ಳಲಿದೆ ಎಂದು ನಿರ್ದೇಶಕರು ಅಭಿಪ್ರಾಯ ಪಡುತ್ತಾರೆ.
ಗುರುಕಿರಣ್ ಸಂಗೀತ ಸಂಯೋಜನೆಯಿರುವ 'ಮೈಲಾರಿ'ಗೆ ಕೆ.ಎಸ್.ಚಂದ್ರಶೇಖರ್ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನ, ಶಿವಕುಮಾರ್ ಕಲಾ ನಿರ್ದೇಶನವಿರುವ ಚಿತ್ರದ ತಾರಾಬಳಗದಲ್ಲಿ ಶಿವರಾಜ್ಕುಮಾರ್, ಸದಾ, ರವಿಕಾಳೆ, ರಂಗಾಯಣರಘು, ಸಂಜನಾ, ಸುರೇಶ್ಹುಬ್ಳಿಕರ್, ಗುರುಪ್ರಸಾದ್(ಮಠ), ಜಾನ್ಕೊಕೇನ್, ಸುರೇಶ್ಮಂಗಳೂರು, ರಾಜುತಾಳಿಕೋಟೆ, ಬುಲೆಟ್ಪ್ರಕಾಶ್, ಮೈಕೋನಾಗರಾಜ್, ಕುರಿ ಪ್ರತಾಪ್, ರಘುರಾಂ, ಕೋಟೆಪ್ರಭಾಕರ್, ವಿಶ್ವ ಮುಂತಾದವರಿದ್ದಾರೆ.