Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಸರಾ ಚಲನಚಿತ್ರೋತ್ಸವಕ್ಕೆ ತಾರಾ ಮೆರುಗು
ಖ್ಯಾತ ಚಲನಚಿತ್ರ ನಟ ಅಂಬರೀಶ್ ಜ್ಯೋತಿ ಬೆಳಗಿಸಲಿದ್ದು, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟನೆ ನೆರವೇರಿಸಲಿರುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್ ಅವರು ಉಪಸ್ಥಿತರಿರುವರು. ಚಾಮರಾಜ ಕ್ಷೇತ್ರದ ಶಾಸಕ ಹೆಚ್.ಎಸ್. ಶಂಕರಲಿಂಗೇಗೌಡ ಅಧ್ಯಕ್ಷತೆ ವಹಿಸುವರು. ಆಹ್ವಾನಿತ ಚಲನಚಿತ್ರ ಕಲಾವಿದರ ಪಟ್ಟಿ ಹೀಗಿದೆ.
ಚಲನಚಿತ್ರ ಕಲಾವಿದರಾದ ಲೀಲಾವತಿ, ಜಯಂತಿ, ಜಯಮಾಲ,ಸುಮಲತಾ ಅಂಬರೀಷ್, ಶ್ರೀನಾಥ್, ದ್ವಾರಕೀಶ್, ಜಗ್ಗೇಶ್, ಜೈ ಜಗದೀಶ್, ವಿಜಯಲಕ್ಷ್ಮಿ ಸಿಂಗ್, ವಿನೋದ್ ರಾಜ್, ಶ್ರೀನಗರ ಕಿಟ್ಟಿ, ದಿಗಂತ್, ಆದಿತ್ಯ, ಕುಮಾರಿ ಶಿರಿನ್ ಹಾಗೂ ಕುಮಾರಿ ಅಮೂಲ್ಯ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಎಂ.ಎಸ್. ರಮೇಶ್, ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಅಶೋಕ್, ವಾರ್ತಾ ಇಲಾಖೆ ನಿರ್ದೇಶಕ ಡಾ: ಮುದ್ದುಮೋಹನ್ ಅವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಅಂದು ಬೆಳಿಗ್ಗೆ 10.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಎದೆತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಂದ ಚಲನಚಿತ್ರಗೀತೆಗಳ ಗಾಯನ ಏರ್ಪಡಿಸಲಾಗಿದೆ. ಹೇಮಂತ್, ಹರ್ಷದೀಪ್, ಅಂಜಲಿ ಭಟ್, ಅಶ್ವಿನಿ, ಶ್ರೇಯಾ, ವೈಷ್ಣವಿ ಮತ್ತಿತರರು ಎಲ್ಲರೂ ಈ ಟಿವಿ ಎದೆತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಸಮಾರಂಭದ ಮುಖ್ಯ ಅತಿಥಿಗಳಾಗಿ ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಮಹಾನಗರ ಪಾಲಿಕೆ ಮಹಾಪೌರರಾದ ಪುಷ್ಪಲತಾ ಟಿ.ಬಿ. ಚಿಕ್ಕಣ್ಣ, ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜೆ. ಸುನೀತಾ ವೀರಪ್ಪಗೌಡ ಸೇರುದಂತೆ ಹಲವರು ಆಗಮಿಸುವರು.
ಅತಿಥಿಗಳಾಗಿ ಲೋಕಸಭಾ ಸದಸ್ಯರುಗಳಾದ ಅಡಗೂರು ಹೆಚ್. ವಿಶ್ವನಾಥ್, ಆರ್. ಧ್ರುವನಾರಾಯಣ್, ಚೆಲುವರಾಯಸ್ವಾಮಿ, ವಿಧಾನಸಭಾ ಸದಸ್ಯರುಗಳಾದ ಹೆಚ್.ಪಿ. ಮಂಜುನಾಥ್, ತನ್ವೀರ್ ಸೇಠ್, ಎಂ. ಸತ್ಯನಾರಾಯಣ, ವಿ. ಶ್ರೀನಿವಾಸ ಪ್ರಸಾದ್, ಹೆಚ್.ಸಿ. ಮಹದೇವಪ್ಪ, ಚಿಕ್ಕಣ್ಣ, ಕೆ. ವೆಂಕಟೇಶ್, ಸಾರಾ ಮಹೇಶ್, ವಿಧಾನ ಪರಿಷತ್ ಸದಸ್ಯರಾದ ಸಿ.ಹೆಚ್. ವಿಜಯಶಂಕರ್, ತೋಂಟದಾರ್ಯ, ಚಿಕ್ಕಮಾದು, ಸಿದ್ದರಾಜು, ಮರಿತಿಬ್ಬೇಗೌಡ, ಗೋ. ಮಧುಸೂದನ್, ಸಂದೇಶ್ ನಾಗರಾಜ್, ಪ್ರೊ: ಕೆ.ಆರ್. ಮಲ್ಲಿಕಾರ್ಜುನಪ್ಪ, ಕೆ.ವಿ. ನಾರಾಯಣಸ್ವಾಮಿ, ವಿವಿಧ ಪ್ರಾಧಿಕಾರಗಳ ಅಧ್ಯಕ್ಷರುಗಳಾದ ಬಿ.ಪಿ. ಮಂಜುನಾಥ್, ಮೈ.ವಿ. ರವಿಶಂಕರ್, ಎಂ. ನಂಜುಂಡಸ್ವಾಮಿ, ಬಿ. ರಾಮಲಿಂಗಯ್ಯ, ಎಲ್. ನಾಗೇಂದ್ರ, ಎಂ.ಜೆ. ರವಿಕುಮಾರ್, ಡಾ: ಬಿ. ಶಿವರಾಂ ಅವರುಗಳು ಆಗಮಿಸಲಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)