Don't Miss!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- News ಡಿಕೆ ಸುರೇಶ್ ನಿದ್ದೆಗೆಡಿಸಿದ ಡಾಕ್ಟರ್; ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ: ಭವಿಷ್ಯ ನುಡಿದ ಸಿದ್ದರಾಮ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಂಕರಣ್ಣ ನೀವು ಇಂದು ಇರಬೇಕಾಗಿತ್ತಣ್ಣ
ಒಂದಲ್ಲ ಒಂದು ಕಾರಣಕ್ಕೆ ಶಂಕರಣ್ಣ ನೆನಪಾಗುತ್ತಲೆ ಇರುತ್ತಾರೆ. ಶಂಕರಣ್ಣ ಕನ್ನಡ ಚಿತ್ರರಂಗವನ್ನು ಅಗಲಿ ಗುರುವಾರಕ್ಕೆ (ಸೆ.30) ಭರ್ತಿ ಇಪ್ಪತ್ತು ವರ್ಷಗಳು ತುಂಬುತ್ತವೆ. ಕಳೆದು ಹೋದ ಈ ಇಪ್ಪತ್ತು ವರ್ಷಗಳಲ್ಲಿ ಅವರಂತಹ ಅಪ್ಪಟ ಪ್ರತಿಭೆ ಕನ್ನಡ ಚಿತ್ರರಂಗಕ್ಕೆ ದೊರೆಯಲಿಲ್ಲ ಎಂಬುದು ದುರಂತ.
ಖಾಕಿ ತೊಡುವ ಮೂಲಕ ಪೊಲೀಸ್ ಚಿತ್ರಗಳನ್ನು ಹೀಗೂ ತೆಗೆಯಬಹುದು ಎಂದು ತೋರಿಸಿಕೊಟ್ಟಿದ್ದರು. ಅವರ ಪ್ರಯೋಗಗಳು ಒಂದೇ ಎರಡೇ. ನಂದಿಬೆಟ್ಟಕ್ಕೆ ರೋಪ್ ವೇ ಹಾಕುವ ಕನಸು, ಫ್ಲೈ ಓವರ್ ಗಳ ಕಲ್ಪನೆಯೇ ಇಲ್ಲದ ಕಾಲದಲ್ಲಿ ಅವುಗಳ ಬಗ್ಗೆ ಯೋಚನೆ, ಸಾರ್ವಜನಿಕರಿಗೆ ಕಂಟ್ರಿ ಕ್ಲಬ್ಬು ಹೀಗೇ ಅವರ ಕನಸುಗಳು ಬರೀ ಚಿತ್ರರಂಗಕ್ಕಷ್ಟೇ ಸೀಮಿತವಾಗಿರಲಿಲ್ಲ.
ಸದಾ ಕ್ರಿಯಾಶೀಲರಾಗಿದ್ದ ಶಂಕರ್ ನಾಗ್ ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ಕಲ್ಪಿಸಿದರು. ಕಿರುತೆರೆಯಲ್ಲೂ ಹೊಸ ಹೊಸ ಪ್ರಯೋಗಗಳನ್ನು ಮಾಡಿದರು. ಮುಖ್ಯವಾಗಿ ಯುವ ನಿರ್ದೇಶಕರು, ಕಲಾವಿದರಿಗೆ ಸ್ಫೂರ್ತಿಯಾಗಿದ್ದರು. ಕನ್ನಡ ಚಿತ್ರೋದ್ಯಮದ ಬಗ್ಗೆ ಶಂಕರಣ್ಣನಂತೆ ವಿಭಿನ್ನವಾಗಿ ಆಲೋಚಿಸುವ ಒಂದೆರಡು ತಲೆಗಳು ತುರ್ತು ಬೇಕಾಗಿವೆ. ಇಲ್ಲದಿದ್ದರೆ ಕನ್ನಡ ಚಿತ್ರರಂಗ ಹಳಿ ತಪ್ಪಿದ ಗೂಡ್ಸ್ ರೈಲಿನಂತಾಗುತ್ತದೆ.