twitter
    For Quick Alerts
    ALLOW NOTIFICATIONS  
    For Daily Alerts

    ಶಂಕರಣ್ಣ ನೀವು ಇಂದು ಇರಬೇಕಾಗಿತ್ತಣ್ಣ

    By * ಉದಯರವಿ
    |

    Shankar Nag
    ಕನ್ನಡ ಚಿತ್ರರಂಗದ ಇಂದಿನ ದುಸ್ಥಿತಿಯನ್ನು ನೋಡುತ್ತಿದ್ದರೆ ಶಂಕರ್ ನಾಗ್ ಅವರಂತಹ ಪ್ರತಿಭಾವಂತರು ಇರಬೇಕಾಗಿತ್ತು ಅನ್ನಿಸುತ್ತದೆ. ಅಣ್ಣಾ ಶಂಕರಣ್ಣ ನೀವಿರಬೇಕಾಗಿತ್ತಣ್ಣ. ಕನ್ನಡ ಚಿತ್ರರಂಗದ ನಿಜವಾದ ಕನಸುಗಾರ ಎಂದು ಹೇಳಬಹುದು. ಆದರೆ ಅವರು ಇಂದು ನಮ್ಮೊಂದಿಗಿಲ್ಲ. ಇಲ್ಲೇ ಎಲ್ಲೋ ಕುಳಿತು ಕನ್ನಡದ ಚಿತ್ರರಂಗದ ಬೌದ್ಧಿಕ ದಿವಾಳಿತನದ ಬಗ್ಗೆ ಮರುಗುತ್ತಿದ್ದರೇನೋ ಎಂಬ ಅನುಮಾನ ಕಾಡುತ್ತದೆ.

    ಒಂದಲ್ಲ ಒಂದು ಕಾರಣಕ್ಕೆ ಶಂಕರಣ್ಣ ನೆನಪಾಗುತ್ತಲೆ ಇರುತ್ತಾರೆ. ಶಂಕರಣ್ಣ ಕನ್ನಡ ಚಿತ್ರರಂಗವನ್ನು ಅಗಲಿ ಗುರುವಾರಕ್ಕೆ (ಸೆ.30) ಭರ್ತಿ ಇಪ್ಪತ್ತು ವರ್ಷಗಳು ತುಂಬುತ್ತವೆ. ಕಳೆದು ಹೋದ ಈ ಇಪ್ಪತ್ತು ವರ್ಷಗಳಲ್ಲಿ ಅವರಂತಹ ಅಪ್ಪಟ ಪ್ರತಿಭೆ ಕನ್ನಡ ಚಿತ್ರರಂಗಕ್ಕೆ ದೊರೆಯಲಿಲ್ಲ ಎಂಬುದು ದುರಂತ.

    ಖಾಕಿ ತೊಡುವ ಮೂಲಕ ಪೊಲೀಸ್ ಚಿತ್ರಗಳನ್ನು ಹೀಗೂ ತೆಗೆಯಬಹುದು ಎಂದು ತೋರಿಸಿಕೊಟ್ಟಿದ್ದರು. ಅವರ ಪ್ರಯೋಗಗಳು ಒಂದೇ ಎರಡೇ. ನಂದಿಬೆಟ್ಟಕ್ಕೆ ರೋಪ್ ವೇ ಹಾಕುವ ಕನಸು, ಫ್ಲೈ ಓವರ್ ಗಳ ಕಲ್ಪನೆಯೇ ಇಲ್ಲದ ಕಾಲದಲ್ಲಿ ಅವುಗಳ ಬಗ್ಗೆ ಯೋಚನೆ, ಸಾರ್ವಜನಿಕರಿಗೆ ಕಂಟ್ರಿ ಕ್ಲಬ್ಬು ಹೀಗೇ ಅವರ ಕನಸುಗಳು ಬರೀ ಚಿತ್ರರಂಗಕ್ಕಷ್ಟೇ ಸೀಮಿತವಾಗಿರಲಿಲ್ಲ.

    ಸದಾ ಕ್ರಿಯಾಶೀಲರಾಗಿದ್ದ ಶಂಕರ್ ನಾಗ್ ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ಕಲ್ಪಿಸಿದರು. ಕಿರುತೆರೆಯಲ್ಲೂ ಹೊಸ ಹೊಸ ಪ್ರಯೋಗಗಳನ್ನು ಮಾಡಿದರು. ಮುಖ್ಯವಾಗಿ ಯುವ ನಿರ್ದೇಶಕರು, ಕಲಾವಿದರಿಗೆ ಸ್ಫೂರ್ತಿಯಾಗಿದ್ದರು. ಕನ್ನಡ ಚಿತ್ರೋದ್ಯಮದ ಬಗ್ಗೆ ಶಂಕರಣ್ಣನಂತೆ ವಿಭಿನ್ನವಾಗಿ ಆಲೋಚಿಸುವ ಒಂದೆರಡು ತಲೆಗಳು ತುರ್ತು ಬೇಕಾಗಿವೆ. ಇಲ್ಲದಿದ್ದರೆ ಕನ್ನಡ ಚಿತ್ರರಂಗ ಹಳಿ ತಪ್ಪಿದ ಗೂಡ್ಸ್ ರೈಲಿನಂತಾಗುತ್ತದೆ.

    Tuesday, November 9, 2010, 17:47
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X