Don't Miss!
- Automobiles ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- News SSLC Result 2024: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಯಾವಾಗ? ಪರಿಶೀಲಿಸುವುದೇಗೆ?-ಮಾಹಿತಿ, ವಿವರ
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಂಕರಣ್ಣ ನೀವು ಇಂದು ಇರಬೇಕಾಗಿತ್ತಣ್ಣ
ಒಂದಲ್ಲ ಒಂದು ಕಾರಣಕ್ಕೆ ಶಂಕರಣ್ಣ ನೆನಪಾಗುತ್ತಲೆ ಇರುತ್ತಾರೆ. ಶಂಕರಣ್ಣ ಕನ್ನಡ ಚಿತ್ರರಂಗವನ್ನು ಅಗಲಿ ಗುರುವಾರಕ್ಕೆ (ಸೆ.30) ಭರ್ತಿ ಇಪ್ಪತ್ತು ವರ್ಷಗಳು ತುಂಬುತ್ತವೆ. ಕಳೆದು ಹೋದ ಈ ಇಪ್ಪತ್ತು ವರ್ಷಗಳಲ್ಲಿ ಅವರಂತಹ ಅಪ್ಪಟ ಪ್ರತಿಭೆ ಕನ್ನಡ ಚಿತ್ರರಂಗಕ್ಕೆ ದೊರೆಯಲಿಲ್ಲ ಎಂಬುದು ದುರಂತ.
ಖಾಕಿ ತೊಡುವ ಮೂಲಕ ಪೊಲೀಸ್ ಚಿತ್ರಗಳನ್ನು ಹೀಗೂ ತೆಗೆಯಬಹುದು ಎಂದು ತೋರಿಸಿಕೊಟ್ಟಿದ್ದರು. ಅವರ ಪ್ರಯೋಗಗಳು ಒಂದೇ ಎರಡೇ. ನಂದಿಬೆಟ್ಟಕ್ಕೆ ರೋಪ್ ವೇ ಹಾಕುವ ಕನಸು, ಫ್ಲೈ ಓವರ್ ಗಳ ಕಲ್ಪನೆಯೇ ಇಲ್ಲದ ಕಾಲದಲ್ಲಿ ಅವುಗಳ ಬಗ್ಗೆ ಯೋಚನೆ, ಸಾರ್ವಜನಿಕರಿಗೆ ಕಂಟ್ರಿ ಕ್ಲಬ್ಬು ಹೀಗೇ ಅವರ ಕನಸುಗಳು ಬರೀ ಚಿತ್ರರಂಗಕ್ಕಷ್ಟೇ ಸೀಮಿತವಾಗಿರಲಿಲ್ಲ.
ಸದಾ ಕ್ರಿಯಾಶೀಲರಾಗಿದ್ದ ಶಂಕರ್ ನಾಗ್ ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ಕಲ್ಪಿಸಿದರು. ಕಿರುತೆರೆಯಲ್ಲೂ ಹೊಸ ಹೊಸ ಪ್ರಯೋಗಗಳನ್ನು ಮಾಡಿದರು. ಮುಖ್ಯವಾಗಿ ಯುವ ನಿರ್ದೇಶಕರು, ಕಲಾವಿದರಿಗೆ ಸ್ಫೂರ್ತಿಯಾಗಿದ್ದರು. ಕನ್ನಡ ಚಿತ್ರೋದ್ಯಮದ ಬಗ್ಗೆ ಶಂಕರಣ್ಣನಂತೆ ವಿಭಿನ್ನವಾಗಿ ಆಲೋಚಿಸುವ ಒಂದೆರಡು ತಲೆಗಳು ತುರ್ತು ಬೇಕಾಗಿವೆ. ಇಲ್ಲದಿದ್ದರೆ ಕನ್ನಡ ಚಿತ್ರರಂಗ ಹಳಿ ತಪ್ಪಿದ ಗೂಡ್ಸ್ ರೈಲಿನಂತಾಗುತ್ತದೆ.