Don't Miss!
- News Air India: ಹಾರಾಟ ನಿಲ್ಲಿಸಿದ ಆಕಾಶದ ರಾಣಿ: ಐಶಾರಾಮಿ ವಿಮಾನದ ಬಗ್ಗೆ ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಂಕರಣ್ಣ ನೀವು ಇಂದು ಇರಬೇಕಾಗಿತ್ತಣ್ಣ
ಒಂದಲ್ಲ ಒಂದು ಕಾರಣಕ್ಕೆ ಶಂಕರಣ್ಣ ನೆನಪಾಗುತ್ತಲೆ ಇರುತ್ತಾರೆ. ಶಂಕರಣ್ಣ ಕನ್ನಡ ಚಿತ್ರರಂಗವನ್ನು ಅಗಲಿ ಗುರುವಾರಕ್ಕೆ (ಸೆ.30) ಭರ್ತಿ ಇಪ್ಪತ್ತು ವರ್ಷಗಳು ತುಂಬುತ್ತವೆ. ಕಳೆದು ಹೋದ ಈ ಇಪ್ಪತ್ತು ವರ್ಷಗಳಲ್ಲಿ ಅವರಂತಹ ಅಪ್ಪಟ ಪ್ರತಿಭೆ ಕನ್ನಡ ಚಿತ್ರರಂಗಕ್ಕೆ ದೊರೆಯಲಿಲ್ಲ ಎಂಬುದು ದುರಂತ.
ಖಾಕಿ ತೊಡುವ ಮೂಲಕ ಪೊಲೀಸ್ ಚಿತ್ರಗಳನ್ನು ಹೀಗೂ ತೆಗೆಯಬಹುದು ಎಂದು ತೋರಿಸಿಕೊಟ್ಟಿದ್ದರು. ಅವರ ಪ್ರಯೋಗಗಳು ಒಂದೇ ಎರಡೇ. ನಂದಿಬೆಟ್ಟಕ್ಕೆ ರೋಪ್ ವೇ ಹಾಕುವ ಕನಸು, ಫ್ಲೈ ಓವರ್ ಗಳ ಕಲ್ಪನೆಯೇ ಇಲ್ಲದ ಕಾಲದಲ್ಲಿ ಅವುಗಳ ಬಗ್ಗೆ ಯೋಚನೆ, ಸಾರ್ವಜನಿಕರಿಗೆ ಕಂಟ್ರಿ ಕ್ಲಬ್ಬು ಹೀಗೇ ಅವರ ಕನಸುಗಳು ಬರೀ ಚಿತ್ರರಂಗಕ್ಕಷ್ಟೇ ಸೀಮಿತವಾಗಿರಲಿಲ್ಲ.
ಸದಾ ಕ್ರಿಯಾಶೀಲರಾಗಿದ್ದ ಶಂಕರ್ ನಾಗ್ ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ಕಲ್ಪಿಸಿದರು. ಕಿರುತೆರೆಯಲ್ಲೂ ಹೊಸ ಹೊಸ ಪ್ರಯೋಗಗಳನ್ನು ಮಾಡಿದರು. ಮುಖ್ಯವಾಗಿ ಯುವ ನಿರ್ದೇಶಕರು, ಕಲಾವಿದರಿಗೆ ಸ್ಫೂರ್ತಿಯಾಗಿದ್ದರು. ಕನ್ನಡ ಚಿತ್ರೋದ್ಯಮದ ಬಗ್ಗೆ ಶಂಕರಣ್ಣನಂತೆ ವಿಭಿನ್ನವಾಗಿ ಆಲೋಚಿಸುವ ಒಂದೆರಡು ತಲೆಗಳು ತುರ್ತು ಬೇಕಾಗಿವೆ. ಇಲ್ಲದಿದ್ದರೆ ಕನ್ನಡ ಚಿತ್ರರಂಗ ಹಳಿ ತಪ್ಪಿದ ಗೂಡ್ಸ್ ರೈಲಿನಂತಾಗುತ್ತದೆ.