Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂಜಾನೆಗೆ ಗಣೇಶ್ ಸೂಕ್ತ ಆಯ್ಕೆ: ಎಸ್ ನಾರಾಯಣ್
ದಶಕಗಳಿಗೂ ಹೆಚ್ಚು ಕಾಲದಿಂದ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಸಾಕಷ್ಟು ಏಳು-ಬೀಳುಗಳನ್ನು ಕಂಡಿರುವ ನಿರ್ದೇಶಕ ಎಸ್ ನಾರಾಯಣ್, ಇದೀಗ ತಮ್ಮ ಪುತ್ರ ಪಂಕಜ್ ಗಾಗಿ 'ಚೌಡಯ್ಯ' ಚಿತ್ರ ನಿರ್ದೇಶಿಸಲಿದ್ದಾರೆ. ಈ ಚಿತ್ರದ ಮುಹೂರ್ತದಂದು ನಾರಾಯಣ್, ಮಾರ್ಚ್ 2, 2012ರಂದು ಬಿಡುಗಡೆಗೆ ಸಜ್ಜಾಗಿರುವ ತಮ್ಮ ಚಿತ್ರ 'ಮುಂಜಾನೆ' ಬಗ್ಗೆ ಹೇಳಿಕೊಂಡರು.
"ಗೋಲ್ಡನ್ ಸ್ಟಾರ್ ಗಣೇಶ್, ಮುಂಜಾನೆ ಚಿತ್ರಕ್ಕೆ ಸೂಕ್ತ ಆಯ್ಕೆ. ಕಥೆ ಮಾಡುವಾಗಲೇ ನನ್ನ ಮನಸ್ಸಿಗೆ ಬಂದವರು ನಟ ಗಣೇಶ್. ಚಿತ್ರಕಥೆ ಮಾಡಿ, ಗಣೇಶ್ ಮುಂದೆ ನಾನು ಹೇಳುತ್ತಿದ್ದಂತೆ ಆತ ಯಾವುದೇ ಪ್ರಶ್ನೆಯನ್ನೂ ಕೇಳದೇ, 'ನಾನು ಶೂಟಿಂಗ್ ಗೆ ಯಾವಾಗ ಬರಲಿ?" ಎಂದಷ್ಟೇ ಕೇಳಿದರು. ಅದೇ ನನಗೆ ಇಷ್ಟವಾಗಿದ್ದಲ್ಲದೇ, ಗಣೇಶ್ ಅವರಿಗಾಗಿ ಹೆಚ್ಚಿನ ಆಸಕ್ತಿವಹಿಸಿ ಕೆಲಸಮಾಡಲೂ ನೆರವಾಯ್ತು" ಎಂದರು.
ಮುಂಜಾನೆ ಚಿತ್ರದಲ್ಲಿ ಗಣೇಶ್, ಮೂರು ಶೇಡ್ಸ್ ಇರುವ ಪಾತ್ರವನ್ನು ಅಚ್ಚುಕಟ್ಟಾಗಿ ಹಾಗೂ ಅಮೋಘವಾಗಿ ಅಭಿನಯಿಸಿದ್ದಾರೆ. ಈ ಪಾತ್ರಕ್ಕೆ ಗಣೇಶ್ ಬಿಟ್ಟರೆ ಬೇರೆ ಯಾರೂ ನ್ಯಾಯ ಸಲ್ಲಿಸಲು ಸಾಧ್ಯವಿರಲಿಲ್ಲ ಎಂಬಷ್ಟು ಚೆನ್ನಾಗಿ ನಟಿಸಿದ್ದಾರೆ" ಎಂದಿದ್ದಾರೆ ಕಲಾಸಾಮ್ರಾಟ್ ಎಸ್ ನಾರಾಯಣ್. ಅವರ ಈ ಹೇಳಿಕೆಯಿಂದ ಸಹಜವಾಗಿ ಗಣೇಶ್ ನಟನೆ ನೋಡಲು ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕಲೇಬೇಕಾಗಿದೆ. (ಒನ್ ಇಂಡಿಯಾ ಕನ್ನಡ)