Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೂರು ದೋಣಿಗಳಲ್ಲಿ ಸಂಚಿತಾ ಪಯಣ
'ರಾವಣ' ಚಿತ್ರದಲ್ಲಿ ನಟಿಸಿದ್ದ ಸಂಚಿತಾ ಪಡುಕೋಣೆ ಇದೀಗ ತೆಲುಗು ಚಿತ್ರರಂಗಕ್ಕೆ ಹಾರಿದ್ದಾರೆ. ಲೂಸ್ ಮಾದ ಅಲಿಯಾಸ್ ಯೋಗೀಶ್ ಜೊತೆ ನಟಿಸಿದ್ದ 'ರಾವಣ' ಚಿತ್ರ ನಿರೀಕ್ಷಿಸಿದ ಮಟ್ಟದಲ್ಲಿ ಯಶಸ್ಸು ತರಲಿಲ್ಲ. ಹಾಗಾಗಿ ಬೇರೆ ಭಾಷೆಯ ಚಿತ್ರಗಳತ್ತ ಸಂಚಿತಾ ತನ್ನ ಚಿತ್ತ ಹರಿಸಿದ್ದಾರೆ. ಒಳ್ಳೆಯ ಅವಕಾಶಗಳು ಸಿಕ್ಕರೆ ಕನ್ನಡಲ್ಲೂ ನಟಿಸುವುದಾಗಿ ಸಂಚಿತಾ ತಿಳಿಸಿದ್ದಾರೆ.
ಕರ್ನಾಟಕದ ಗಡಿ ಭಾಗದ ಪ್ರೇಕ್ಷಕರಿಗೆ ಇಷ್ಟವಾಗಿರುವ ಸಂಚಿತಾ ಇದೀಗ ತೆಲುಗು ಪ್ರೇಕ್ಷಕರನ್ನು ರಂಜಿಸಲು ಅತ್ತ ದಾಪುಗಾಲು ಹಾಕಿದ್ದಾರೆ. ರಾಜಾ ಎಂಬಾತ ಸಂಚಿತಾ ನಟಿಸಲಿರುವ ತೆಲುಗು ಚಿತ್ರದ ನಾಯಕ. ಮಧುಬಾಲಾ ಪಾತ್ರದಲ್ಲಿ ಸಂಚಿತಾ ಕಾಣಿಸಲಿದ್ದಾರೆ.ಇದೇ ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸುತ್ತಿರುವವರು ಶ್ರೀನಿವಾಸ ಎಂಬುವವರು.
ಈಗಾಗಲೇ ಸಂಚಿತಾ ಅಭಿನಯಿಸಿದ ತಮಿಳು ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಮಿಳಿನ 'ವೆಟ್ಟೈಕ್ಕಾರನ್' ಚಿತ್ರದ ಸಣ್ಣ ಪಾತ್ರದಲ್ಲಿ ಸಂಚಿತಾ ತಾವೇನೆಂದು ಸಾಬೀತುಪಡಿಸಿಕೊಂಡಿದ್ದಾರೆ. ಇದೀಗ ಸಂಚಿತಾ ತಮಿಳಿನ 'ಪಿಲ್ಲೈಯಾರ್ ಥೇರು ಕಡೈಸಿ ವೀಡು' ಎಂಬ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಕನ್ನಡ, ತೆಲುಗು ಮತ್ತು ತಮಿಳಿನ ಮೂರು ದೋಣಿಗಳಲ್ಲಿ ಸಂಚಿತಾ ಪಯಣ ಸಾಗಲಿದೆ.