Don't Miss!
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಲಾಶ್ರೀ ಜೊತೆ ನಟಿಸುವ ಆಸೆ: ವಿಜಯ್
ದುನಿಯಾ ವಿಜಯ್ ಮತ್ತು ನಟಿ ಮಾಲಾಶ್ರೀ ಕಾಂಬಿನೇಷನ್ ನಲ್ಲಿ ಮುಂದೊಂದು ದಿನ ಚಿತ್ರ ಬರುವ ಸಾಧ್ಯತೆಯಿದೆ. ಅದು ಯಾವ ರೀತಿಯ ಚಿತ್ರ ಎಂಬುದು ಪ್ರೇಕ್ಷಕರ ಊಹೆಗೆ ಬಿಟ್ಟಿದ್ದು. ಮಾಲಾಶ್ರೀ ಮೇಡಂ ಜೊತೆ ಸಾಹಸ ಪ್ರಧಾನ ಚಿತ್ರದಲ್ಲಿ ನಟಿಸಬೇಕು ಎಂಬ ಆಸೆಯನ್ನು ವಿಜಿ ತೋಡಿಕೊಂಡಿದ್ದಾರೆ. ಇದಕ್ಕೆ ಮಾಲಾಶ್ರೀ ಮೇಡಂ ಸಹ ಐ ಡೋಂಟ್ ಮೈಂಡ್ ಎಂದಿದ್ದಾರೆ.
ಸಾಹಸ ಪ್ರಧಾನ ಚಿತ್ರಗಳಲ್ಲಿ ಮಾಲಾಶ್ರೀ ಅವರ ಅಭಿನಯ ನಾಯಕ ನಟರು ನಾಚುವಂತಿರುತ್ತದೆ. ಎರಡು ದಶಕಗಳ ಕಾಲ ನಾಯಕಿಯಾಗಿ ಮಾಲಾಶ್ರೀ ಕನ್ನಡ ಚಿತ್ರರಂಗದಲ್ಲಿ ತಮ್ಮ ತಾಕತ್ ಏನು ಎಂಬುದನ್ನು ತೋರಿಸಿದ್ದಾರೆ ಎಂದು ವಿಜಯ್ ಪ್ರಶಂಸಿದ್ದಾರೆ. ಸಂದರ್ಭ 'ಕಂಠೀರವ' ಚಿತ್ರದ ಮುಹೂರ್ತ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕ್ಯಾಮೆರಾ ಸ್ವಿಚ್ ಆನ್ ಮಾಡುವ ಮೂಲಕ 'ಕಂಠೀರವ' ಚಿತ್ರಕ್ಕೆ ಚಾಲನೆ ನೀಡಲಾಯಿತು. ತೆಲುಗಿನ ಯಶಸ್ವಿ ಚಿತ್ರ ಼'ಸಿಂಹಾದ್ರಿ'ಯ ರೀಮೇಕ್ ಇದಾಗಿದೆ. ವಿಜಯ್ ಗೆ ಜೊತೆಯಾಗಿ ಶುಭಾ ಪೂಂಜಾ ಮತ್ತು ರಿಶಿಕಾ ಸಿಂಗ್ ಅಭಿನಯಿಸುತ್ತಿದ್ದಾರೆ. ರಾಮು ಎಂಟರ್ ಪ್ರೈಸಸ್ ನಿರ್ಮಿಸುತ್ತಿರುವ ಮತ್ತೊಂದು ಅದ್ದೂರಿ ಚಿತ್ರ.
ಮೈಸೂರು, ಬೆಂಗಳೂರು ಮತ್ತು ಕೇರಳದಲ್ಲಿ ಚಿತ್ರೀಕರಣ ನಡೆಯಲಿದೆ. ಮೂಲ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದ ದಾಸರಿ ಸೀನು ಅವರ ಛಾಯಾಗ್ರಹಣ 'ಕಂಠೀರವ' ಚಿತ್ರಕ್ಕಿದೆ. ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರ ಮಗಳು ರಿಶಿಕಾ ಸಿಂಗ್ ಚಿತ್ರದ ನಾಯಕಿಯರಲ್ಲಿ ಒಬ್ಬರು. ತುಷಾರ್ ರಂಗನಾಥ್ ಅವರ ನಿರ್ದೇಶನ 'ಕಂಠೀರವ' ಚಿತ್ರಕ್ಕಿದೆ.