Don't Miss!
- Sports SRH vs MI IPL Match: ಹೈಲೈಟ್ಸ್ ನಂತೆ ಕಂಡ ಲೈವ್ ಮ್ಯಾಚ್: ಮುತ್ತಿನ ನಗರಿಯಲ್ಲಿ ಆರ್ಭಟಿಸಿ ಇತಿಹಾಸದ ಪುಟ ಸೇರಿದ SRH
- Lifestyle ಬೆಂಗಳೂರಿಗರೇ... ನೀರಿನ ಕೊರತೆ ತಪ್ಪಿಸಲು ಈ ಟ್ರಿಕ್ಸ್ ಹಾಗೂ ಟಿಪ್ಸ್ ತುಂಬಾನೇ ಪ್ರಯೋಜನಕಾರಿಯಾಗಿದೆ ನೋಡಿ
- News Chitradurga Lok Sabha Constituency: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ರಾಜಕೀಯ ಹಿನ್ನೆಲೆ ತಿಳಿಯಿರಿ-ಮಾಹಿತಿ, ವಿವರ
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೂರು ಕತೆ, ಮೂರು ನಿರ್ದೇಶಕರು 'ಶಾಂತಿಯನ್ನು ಕಳೆದುಕೊಳ್ಳಬೇಡಿ' ಎನ್ನುತ್ತಿರುವುದೇಕೆ?
ಚಂದನವನದಲ್ಲಿ ವಿಭಿನ್ನ ರೀತಿಯ ಸಿನಿಮಾಗಳೇನು ಕೊರತೆ ಇಲ್ಲ. ಚಿತ್ರರಂಗಕ್ಕೆ ಎಂಟ್ರಿ ಕೊಡುವ ಹೊಸಬರು ಹೊಸ ರೀತಿಯ ಕತೆ, ವಿನೂತ ಪ್ರಯತ್ನದ ಮೂಲಕ ಕನ್ನಡ ಚಿತ್ರ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ. ಇದೀಗ ಚಂದನವನದಲ್ಲಿ 'ಶಾಂತಿಯನ್ನು ಕಳೆದುಕೊಳ್ಳಬೇಡಿ' ಎನ್ನುವ ಹೊಸ ಸಿನಿಮಾ ಸೆಟ್ಟೇರಿದೆ.
ಈ ಸಿನಿಮಾ ವಿಶೇಷತೆ ಎಂದರೆ ಮೂರು ಕತೆ, ಮೂವರು ನಿರ್ದೇಶಕರು. ಈಗಾಗಲೇ ಚಂದನವನದಲ್ಲಿ ಇದೇ ಮಾದರಿಯ ಕಥಾಸಂಗಮ ಎನ್ನುವ ಸಿನಿಮಾ ರಿಲೀಸ್ ಆಗಿದೆ. ಇದೀಗ ಅದೇ ರೀತಿಯ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸಬರ ತಂಡವೊಂದು ಸದ್ದು ಮಾಡುತ್ತಿದೆ.
ಈಗಾಗಲೇ ಕಿರುತೆರೆಯಲ್ಲಿ ಸಹ ನಿರ್ದೇಶಕರಾಗಿ ಅನುಭವ ಹೊಂದಿದ್ದ ವಿಘ್ನೇಶ್ ಶೇರೆಗಾರ್ ಶಾಂತಿಯನ್ನು ಕಳೆದುಕೊಳ್ಳಬೇಡಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಕಾಲಿಡುತ್ತಿದ್ದಾರೆ. ಇನ್ನು ಗಿರೀಶ್ ಕಾಸರವಳ್ಳಿ ಜೊತೆ ಕೆಲಸ ಮಾಡಿರುವ ಬಾಸುಮ ಮತ್ತು ಕಿರುಚಿತ್ರ ನಿರ್ದೇಶನ ಮಾಡಿರುವ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ.
ವಿಘ್ನೇಶ್ ನಿರ್ದೇಶನದ ಮೊದಲ ಭಾಗದ ಕಥೆ ಮಾನವನ ಅಸ್ತಿತ್ವದ ಬಗ್ಗೆ ಹೇಳಲಿದೆಯಂತೆ. ಮನುಷ್ಯ ಸತ್ತ ಮೇಲೂ ಜೀವಂತವಾಗಿರುವ ಬಗ್ಗೆ ಕಥೆ ಹೇಳುತ್ತಾರೆ. ಎರಡನೇ ಭಾಗದ ಕಥೆಯನ್ನು ಬಾಸುಮ ಕೊಡಗು ನಿರ್ದೇಶಿಸುತ್ತಿದ್ದು ಇದರಲ್ಲಿ ತಾಯಿ ಮಗುವಿನ ಸಂಬಂಧದ ಬಗ್ಗೆ ಹೇಳುತ್ತಿದ್ದಾರೆ. ಮೂರನೇ ಕಥೆ, ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿದ್ದು, ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬರುವ ಹುಡುಗನೊಬ್ಬ ಹ್ಯಾಕರ್ ಆಗಿ ಬದಲಾಗುವ ಕುರಿತಾಗಿದೆ.
Recommended Video
ನಾಯಕ ನಟನಾಗಿ ಕಾರ್ತಿಕ್ ಹಾಗೂ ನಾಯಕಿಯಾಗಿ ಹರ್ಷಿತಾ ಅಭಿನಯಿಸಿದ್ದು, ನಿರ್ದೇಶಕರಿಂದ ಹಿಡಿದು ಈ ಸಿನಿಮಾದಲ್ಲಿ ಹಿರಿಯ ನಟರಾದ ಜಿ.ಕೆ. ಶಂಕರ್, ರಾಜಣ್ಣ, ಹಾಗೂ ನಟರನ್ನೂ ಸೇರಿ ಎಲ್ಲವೂ ಹೊಸಬರ ತಂಡವೇ ಆಗಿದೆ. ಕಾರ್ತಿಕ್, ಇಂದ್ರಜಿತ್, ಹರ್ಷಿತಾ, ಸಂಗೀತ, ಚಂದ್ರಕಲಾ ಭಟ್,ರಾಕೇಶ್, ಸಂಪತ್ ಶಾಸ್ತ್ರೀ ,ಕಾವ್ಯ ಕೊಡಗು ಅವರ ತಾರಾಂಗಣವಿದೆ.