Don't Miss!
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- News Bride Kidnap Video: ವರನ ಕಣ್ಣಿಗೆ ಮೆಣಸಿನ ಪುಡಿ ಹಾಕಿ ವಧುವಿನ ಅಪಹರಣಕ್ಕೆ ಯತ್ನ: ವಿಡಿಯೋ
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್ ಬಗ್ಗೆ ಭಾರತದ ಮಾಜಿ ಆಟಗಾರರ ಅಭಿಪ್ರಾಯ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ವಾರ ತೆರೆ ಕಾಣುತ್ತಿರುವ ಕನ್ನಡ ಚಿತ್ರಗಳು
ಸ್ಯಾಂಡಲ್ ವುಡ್ ಚಿತ್ರಪ್ರೇಮಿಗಳಿಗೆ ಈ ವಾರ ಗಣೇಶ ಹಬ್ಬದ ಪ್ರಯುಕ್ತ ವಿಭಿನ್ನ ಸಿನಿಮಾಗಳು ಬಿಡುಗಡೆಯಾಗುತ್ತಿದೆ. ಕನ್ನಡ ಪ್ರೇಕ್ಷಕರಿಗೆ ಈ ವಾರ ತ್ರಿಬಲ್ ಧಮಕಾ.
ಕನ್ನಡದಲ್ಲಿ ಈ ವಾರ ಒಟ್ಟು ಮೂರು ಚಿತ್ರಗಳು ಬಿಡುಗಡೆಯಾಗುತ್ತಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ 'ಸಾಹೇಬ', ನಿಧಿ ಸುಬ್ಬಯ್ಯ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ '5ಜಿ' ಹಾಗೂ ಬಹು ತಾರಬಳಗ ಹೊಂದಿರುವ 'ಮಾರ್ಚ್-22' ಚಿತ್ರಗಳು ಈ ವಾರ ಚಿತ್ರಮಂದಿರಕ್ಕೆ ಲಗ್ಗೆಯಿಡುತ್ತಿವೆ.
'ಸಾಹೇಬ' ಚಿತ್ರದ ಬಗ್ಗೆ
ಮನೋರಂಜನ್ ಅಭಿನಯದ ಚೊಚ್ಚಲ ಸಿನಿಮಾ 'ಸಾಹೇಬ'. ಮನೋರಂಜನ್ ಗೆ 'ಮಾಸ್ಟರ್ ಪೀಸ್' ಬೆಡಗಿ ಶಾನ್ವಿ ಶ್ರೀವಾತ್ಸವ್ ಜೊತೆಯಾಗಿದ್ದಾರೆ. ಈ ಚಿತ್ರಕ್ಕೆ ಭರತ್ ಆಕ್ಷನ್ ಕಟ್ ಹೇಳಿದ್ದು, ಜಯಣ್ಣ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಜಯಣ್ಣ-ಭೋಗೇಂದ್ರ ನಿರ್ಮಾಣ ಮಾಡಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ.
'5ಜಿ' ಚಿತ್ರದ ವಿಶೇಷತೆ
'ಸಿಂಪಲಾಗ್ ಇನ್ನೊಂದು ಲವ್ ಸ್ಟೋರಿ' ಖ್ಯಾತಿಯ ನಟ ಪ್ರವೀಣ್ ಹಾಗೂ ನಿಧಿ ಸುಬ್ಬಯ್ಯ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ವಿಭಿನ್ನ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವುದು ಗುರುವೇಂದ್ರ ಶೆಟ್ಟಿ. ಶ್ರೀಧರ್ ವಿ.ಸಂಭ್ರಮ್ ಚಿತ್ರಕ್ಕೆ ರಾಗ ಸಂಯೋಜನೆ ಮಾಡಿದ್ದಾರೆ. ಗುರು ಪ್ರಶಾಂತ ರೈ ಅವರು ಛಾಯಗ್ರಾಹಣ ಈ ಚಿತ್ರಕ್ಕಿದೆ. ಜಗದೀಶ, ದೀಪು ಹಾಗೂ ಗಿರೀಶ್ ಕುಮಾರ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
ಆಗಸ್ಟ್ 25 ರಂದು ಸ್ಯಾಂಡಲ್ ವುಡ್ ಗೆ '5G' ಎಂಟ್ರಿ
'ಮಾರ್ಚ್-22' ಸಿನಿಮಾ ಕಥೆ
ಮಂಗಳೂರು ಮೂಲದ ದುಬೈನ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹಾಗೂ ಅವರ ಪತ್ನಿ ಶರ್ಮಿಳಾ ಶೇರಿಗಾರ್ 'ಮಾರ್ಚ್-22' ಚಿತ್ರವನ್ನ ನಿರ್ಮಿಸಿದ್ದಾರೆ. ಆರ್ಯವರ್ಧನ್ ಹಾಗೂ ಕಿರಣ್ ರಾಜ್ ಎಂಬ ನವ ನಟರು ಈ ಚಿತ್ರದಲ್ಲಿ ನಾಯಕನಟರಾಗಿದ್ದು, ಮೇಘಶ್ರೀ ಮತ್ತು ದೀಪ್ತಿ ಶೆಟ್ಟಿ ನಾಯಕಿ ಆಗಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಇನ್ನುಳಿದಂತೆ ಅನಂತ್ ನಾಗ್, ಗೀತಾ, ರಮೇಶ್ ಭಟ್, ಸಾಧುಕೋಕಿಲಾ, ಜೈಜಗದೀಶ್, ಆಶಿಶ್ ವಿದ್ಯಾರ್ಥಿ, ಪದ್ಮಜಾ ರಾವ್ ಸೇರಿದಂತೆ ಹಲವು ರಂಗಭೂಮಿ ಕಲಾವಿದರು ಕೂಡ ಕಾಣಿಸಿಕೊಂಡಿದ್ದಾರೆ.
ನಿಮ್ಮ ಆಯ್ಕೆ ಯಾವುದು?
ಈ ಮೂರು ಚಿತ್ರಗಳಲ್ಲಿ ನಿಮ್ಮ ಆಯ್ಕೆ ಯಾವುದು? ಯಾವ ಸಿನಿಮಾವನ್ನ ಮೊದಲ ದಿನ, ಮೊದಲ ಶೋ ನೋಡುತ್ತೀರಾ ಎಂದು ಕೆಳಗೆ ನೀಡಿರುವ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ....