Don't Miss!
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ಶುಕ್ರವಾರ ಮೂರು ಸಿನಿಮಾಗಳ ಬಿಡುಗಡೆ
ಈ ಶುಕ್ರವಾರ ಹೊಸ ಸಿನಿಮಾ ನೋಡಬೇಕು ಎನ್ನುವವರಿಗಾಗಿ ಕನ್ನಡದ ಮೂರು ಚಿತ್ರಗಳು ಸಿದ್ಧವಾಗಿವೆ. 'ಹಫ್ತಾ', 'ಕೃಷ್ಣ ಗಾರ್ಮೆಂಟ್ಸ್' ಹಾಗೂ 'ಸಾರ್ವಜನಿಕರಲಿ ವಿನಂತಿ' ಸಿನಿಮಾಗಳು ನಾಳೆ (ಶುಕ್ರವಾರ) ರಿಲೀಸ್ ಆಗುತ್ತಿವೆ.
'ಹಫ್ತಾ' ಟ್ರೇಲರ್ ಮೆಚ್ಚಿಕೊಂಡ ಸ್ಯಾಂಡಲ್ ವುಡ್ ಸ್ಟಾರ್ಸ್
'ಹಫ್ತಾ' ವರ್ಧನ್ ತೀರ್ಥಹಳ್ಳಿ ನಟನೆಯ ಮೊದಲ ಸಿನಿಮಾವಾಗಿದೆ. ಈ ಹಿಂದೆ ಸಾಕಷ್ಟು ಚಿತ್ರದಲ್ಲಿ ಖಳನಟನಾಗಿ ಕಾಣಿಸಿಕೊಂಡಿದ್ದ ಈ ನಟ ಈಗ ಹೀರೋ ಆಗಿದ್ದಾರೆ. ಭೂಗತ ಲೋಕದ ಕಥೆ ಹೊಂದಿರುವ ಈ ಸಿನಿಮಾ ಪಕ್ಕಾ ಮಾಸ್ ಸ್ಟೈಲ್ ನಲ್ಲಿ ಇದೆ. ವರ್ಧನ್ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ.
'ಕೃಷ್ಣ ಗಾರ್ಮೆಂಟ್ಸ್' ಸಿನಿಮಾ ಕೂಡ ಇದೇ ವಾರ ತೆರೆಗೆ ಬರುತ್ತಿದೆ. ಸಿದ್ದು ಪೂರ್ಣಚಂದ್ರ ನಿರ್ದೇಶನದ ಥ್ರಿಲ್ಲರ್ ಚಿತ್ರ ಇದಾಗಿದೆ. ರಶ್ಮಿತ್, ಚಂದು ಗೌಡ, ವರ್ಧನ್ ತೀರ್ಥಹಳ್ಳಿ ಮತ್ತು ರಾಜೇಶ್ ನಟರಂಗ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಷಣ್ಮುಖ ಜಿ ಬೆಂಡಿಗೇರಿ ಚಿತ್ರಕ್ಕೆ ಬಂಡವಾಳ ಹೂಡಿದ್ದರೆ, ರಘು ಧನ್ವಂತರಿ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
'ಸಾರ್ವಜನಿಕರಲಿ ವಿನಂತಿ' ಸಿನಿಮಾ ಜೂನ್ 21 ರಂದು ಬಿಡುಗಡೆಯಾಗುತ್ತಿದೆ. ಮದನ್ ರಾಜ್, ಅಮೃತಾ ಕೆ ಮಂಡ್ಯ ರಮೇಶ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂಜು ಬಸಯ್ಯ, ನಾಗೇಶ್ ಮಯ್ಯಾ, ರಮೇಶ್ ಪಂಡಿತ್ ಸಿನಿಮಾದಲ್ಲಿ ನಟಿಸಿದ್ದಾರೆ.
ಈ ಮೂರು ಚಿತ್ರಗಳು ಶುಕ್ರವಾರ ಬಿಡುಗಡೆಯಾಗುತ್ತಿದ್ದು, ಯಾವ ಸಿನಿಮಾಗೆ ಪ್ರೇಕ್ಷಕರು ಜೈಕಾರ ಹಾಕಲಿದ್ದಾರೆ ಎನ್ನುವುದು ನಾಳೆ ತಿಳಿಯಲಿದೆ.