Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಜೊತೆ ಭೂಮಿ ತೂಕದ ಹೆಣ್ಣು ಭೂಮಿಕಾ
ಕಡೆಗೂ ಅಂದುಕೊಂಡದನ್ನು ಸಾಧಿಸಿದ್ದಾರೆ ನಿರ್ಮಾಪಕ ಶಂಕರೇಗೌಡ. ತಮ್ಮ ನಿರ್ಮಾಣದ 'ವರದನಾಯಕ' ಚಿತ್ರಕ್ಕೆ ನಾಯಕಿಯಾಗಿ ಭೂಮಿ ತೂಕದ ಹೆಣ್ಣು ಭೂಮಿಕಾರನ್ನು ಕರೆದಂತಿದ್ದಾರೆ. ಈ ಚಿತ್ರಕ್ಕೆ ಅಯ್ಯಪ್ಪ ಶರ್ಮ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಸದ್ಯಕ್ಕೆ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸುನಿಂದ ಸಾಗಿದೆ. ಚಿತ್ರದ ಮುಖ್ಯಭೂಮಿಕೆಯಲ್ಲಿ ಚಿರಂಜೀವಿ ಸರ್ಜಾ ಹಾಗೂ ನಿಕೇಶಾ ಪಟೇಲ್ ಇದ್ದಾರೆ. ಸುದೀಪ್ ಹಾಗೂ ಅರ್ಜುನ್ ಸರ್ಜಾ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಪೋಷಿಸುತ್ತಿದ್ದಾರೆ. ಚಿತ್ರದಲ್ಲಿ ಸುದೀಪ್ಗೆ ಜೊತೆಯಾಗಲಿದ್ದಾರೆ ಬಹುಭಾಷಾ ತಾರೆ ಭೂಮಿಕಾ.
ಚಿತ್ರದಲ್ಲಿ ಚಿರಂಜೀವಿ ಸರ್ಜಾ ಅಣ್ಣನಾಗಿ ಸುದೀಪ್ ಕಾಣಿಸಲಿದ್ದಾರೆ. ಈ ಹಿಂದೆ ಈ ಚಿತ್ರಕ್ಕೆ ಪ್ರಿಯಾಮಣಿ ಕರೆತರಲು ಚಿಂತಿಸಿದ್ದರು. ಆದರೆ ಸಾಕಷ್ಟು ಬ್ಯುಸಿಯಾಗಿರುವ ಪ್ರಿಯಾಮಣಿ ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಅವರರನ್ನು ಕೈಬಿಡಲಾಯಿತು.
ಸದ್ಯಕ್ಕೆ ಹೈದರಾಬಾದ್ನಲ್ಲಿ 'ಈಗ' ಚಿತ್ರೀಕರಣದಲ್ಲಿರುವ ಸುದೀಪ್ ಆಗಸ್ಟ್ 9ರಂದು ಬೆಂಗಳೂರಿಗೆ ಆಗಮಿಸಿ 'ವರದನಾಯಕ' ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಅವರು 'ರಾಜಾ ವಿಷ್ಣುವರ್ಧನ' ಹಾಡಿನ ಚಿತ್ರೀಕರಣ ಪಾಲ್ಗೊಳ್ಳಲಿದ್ದು ಬಳಿಕ ವರದನಾಯಕನಿಗೆ ಬಣ್ಣ ಹಚ್ಚಿಕೊಳ್ಳಲಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)