Don't Miss!
- News ಬೆಂಗಳೂರಲ್ಲಿ ನಿತ್ಯ 10 mld ಸಂಸ್ಕರಿಸಿದ ನೀರು ಪೂರೈಕೆ: BWSSB
- Sports Rishabh Pant: ಟಿ20 ವಿಶ್ವಕಪ್ಗೆ ರಿಷಭ್ ಪಂತ್ ಭಾರತ ತಂಡದಲ್ಲಿರಬೇಕು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಜೊತೆ ಭೂಮಿ ತೂಕದ ಹೆಣ್ಣು ಭೂಮಿಕಾ
ಕಡೆಗೂ ಅಂದುಕೊಂಡದನ್ನು ಸಾಧಿಸಿದ್ದಾರೆ ನಿರ್ಮಾಪಕ ಶಂಕರೇಗೌಡ. ತಮ್ಮ ನಿರ್ಮಾಣದ 'ವರದನಾಯಕ' ಚಿತ್ರಕ್ಕೆ ನಾಯಕಿಯಾಗಿ ಭೂಮಿ ತೂಕದ ಹೆಣ್ಣು ಭೂಮಿಕಾರನ್ನು ಕರೆದಂತಿದ್ದಾರೆ. ಈ ಚಿತ್ರಕ್ಕೆ ಅಯ್ಯಪ್ಪ ಶರ್ಮ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಸದ್ಯಕ್ಕೆ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸುನಿಂದ ಸಾಗಿದೆ. ಚಿತ್ರದ ಮುಖ್ಯಭೂಮಿಕೆಯಲ್ಲಿ ಚಿರಂಜೀವಿ ಸರ್ಜಾ ಹಾಗೂ ನಿಕೇಶಾ ಪಟೇಲ್ ಇದ್ದಾರೆ. ಸುದೀಪ್ ಹಾಗೂ ಅರ್ಜುನ್ ಸರ್ಜಾ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಪೋಷಿಸುತ್ತಿದ್ದಾರೆ. ಚಿತ್ರದಲ್ಲಿ ಸುದೀಪ್ಗೆ ಜೊತೆಯಾಗಲಿದ್ದಾರೆ ಬಹುಭಾಷಾ ತಾರೆ ಭೂಮಿಕಾ.
ಚಿತ್ರದಲ್ಲಿ ಚಿರಂಜೀವಿ ಸರ್ಜಾ ಅಣ್ಣನಾಗಿ ಸುದೀಪ್ ಕಾಣಿಸಲಿದ್ದಾರೆ. ಈ ಹಿಂದೆ ಈ ಚಿತ್ರಕ್ಕೆ ಪ್ರಿಯಾಮಣಿ ಕರೆತರಲು ಚಿಂತಿಸಿದ್ದರು. ಆದರೆ ಸಾಕಷ್ಟು ಬ್ಯುಸಿಯಾಗಿರುವ ಪ್ರಿಯಾಮಣಿ ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಅವರರನ್ನು ಕೈಬಿಡಲಾಯಿತು.
ಸದ್ಯಕ್ಕೆ ಹೈದರಾಬಾದ್ನಲ್ಲಿ 'ಈಗ' ಚಿತ್ರೀಕರಣದಲ್ಲಿರುವ ಸುದೀಪ್ ಆಗಸ್ಟ್ 9ರಂದು ಬೆಂಗಳೂರಿಗೆ ಆಗಮಿಸಿ 'ವರದನಾಯಕ' ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಅವರು 'ರಾಜಾ ವಿಷ್ಣುವರ್ಧನ' ಹಾಡಿನ ಚಿತ್ರೀಕರಣ ಪಾಲ್ಗೊಳ್ಳಲಿದ್ದು ಬಳಿಕ ವರದನಾಯಕನಿಗೆ ಬಣ್ಣ ಹಚ್ಚಿಕೊಳ್ಳಲಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)