Don't Miss!
- News Mukhtar Ansari's death: ಉತ್ತರಪ್ರದೇಶದಲ್ಲಿ ಕಿಚ್ಚು ಹಚ್ಚಿದ ಗ್ಯಾಂಗ್ಸ್ಟಾರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಳ್ಳರನ್ನು ಜಗ್ಗೇಶ್ ಚೇಸ್ ಮಾಡಿದ್ದು ಹೇಗೆ ಗೊತ್ತಾ
ಈ ಸಂದರ್ಭದಲ್ಲಿ ಅಲ್ಲೇ ಇದ್ದ ನಟ ಜಗ್ಗೇಶ್ ಹಾಗೂ ಅವರ ಕಾರು ಚಾಲಕ ಪದ್ಮನಾಭ ಅವರು ಬೈಕಿನಲ್ಲಿ ಸರಗಳ್ಳರ ಬೆನ್ನತ್ತಿದ್ದಾರೆ. ಬಳಿಕ ಸರಗಳ್ಳರನ್ನು ಹಿಡಿಯುವಲ್ಲಿ ಜಗ್ಗೇಶ್ ಹಾಗೂ ಯುವಕರು ಯಶಸ್ವಿಯಾಗಿದ್ದಾರೆ. ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಜಗ್ಗೇಶ್ ಏನು ಹೇಳಿದರೆಂದರೆ ಅವರ ಮಾತಿನಲ್ಲೇ ಕೇಳಿರಿ. ಓವರ್ ಟು ಜಗ್ಗೇಶ್...
ಬಾಡಿಗಾರ್ಡ್ ಚಿತ್ರದ ಪ್ರೀಮಿಯರ್ ಶೋವನ್ನು ಮಲ್ಲೇಶ್ವರಂನ ರೇಣುಕಾಂಬ ಸ್ಟುಡಿಯೋದಲ್ಲಿ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ನಾನು ಮತ್ತು ನಮ್ಮ ಡ್ರೈವರ್ ಹೊರಗೆ ನಿಂತಿದ್ದೆವು. ಇಬ್ಬರು ಯುವಕರು ಯುವತಿಯೊಬ್ಬಳನ್ನು ಜಡೆ ಹಿಡಿದು ಎಳೆದುಕೊಂಡು ಹೋಗುತ್ತಿದ್ದನ್ನು ನೋಡಿದೆವು. ರಸ್ತೆಯಲ್ಲಿ ಹೋಗುತ್ತಿದ್ದವರೊಬ್ಬರ ಬೈಕನ್ನು ಪಡೆದು ದುಷ್ಕರ್ಮಿಗಳ ಬೆನ್ನತ್ತಿದೆವು.
ಕಿಡಿಗೇಡಿಗಳು ಸಣ್ಣ ಪುಟ್ಟ ರಸ್ತೆಗಳೆಲ್ಲೆಲ್ಲಾ ನುಗ್ಗುತ್ತಾ ಎಕ್ಸೇಫ್ ಆಗಲು ಪ್ರಯತ್ನಿಸುತ್ತಿದ್ದರು. ಆದರೂ ನಾವು ಅವರನ್ನು ಹಿಂಬಾಲಿಸುತ್ತಲೇ ಹೋದೆವು. ಕ್ಯೂನಿ ಕಾನ್ವಂಟ್ ಬಳಿ ಕಾರೊಂದು ಅಡ್ಡಬಂದ ಕಾರಣ ಕಿಡಿಗೇಡಿಗಳು ತಮ್ಮ ಬೈಕನ್ನು ನಿಲ್ಲಿಸಿದರು. ನಾವು ಹಿಂದಿನಿಂದ ಅವರ ಬೈಕಿಗೆ ಡಿಕ್ಕಿ ಹೊಡೆದು ಕೆಳಗುರುಳಿಸಿದೆವು. ಬಳಿಕ ಇಬ್ಬರನ್ನು ಹಿಡಿದುಕೊಂಡೆವು.
ಸ್ನೇಹಿತರಿಗೆ ಪಾರ್ಟಿ ಕೊಡಿಸಲು ಈ ಕೆಲಸ ಮಾಡಿದ್ದಾಗಿ ಸರಗಳ್ಳಲು ತಿಳಿಸಿದ್ದು, ತಮ್ಮನ್ನು ಪೊಲೀಸರಿಗೆ ಒಪ್ಪಿಸದೆ ಬಿಟ್ಟುಬಿಡುವಂತೆ ಅಂಗಲಾಚಿ ಬೇಡಿಕೊಂಡರು. ಯುವಕರು ಹಣಕ್ಕಾಗಿ ಈ ರೀತಿಯ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗುತ್ತಿರುವುದು ವಿಷಾದನೀಯ. ತಂದೆತಾಯಿ ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದಿದ್ದಾರೆ ಜಗ್ಗೇಶ್. ಯುವತಿಯರ ಪಾಲಿಗೆ ನಿಜಜೀವನದಲ್ಲೂ ಜಗ್ಗೇಶ್ ಬಾಡಿಗಾರ್ಡ್ ಆಗಿದ್ದಕ್ಕೆ ಥ್ಯಾಂಕ್ಸ್ ಹೇಳಲೇಬೇಕು. (ದಟ್ಸ್ಕನ್ನಡ ಸಿನಿವಾರ್ತೆ)