Don't Miss!
- News Namma Metro: ಬೆಂಗಳೂರಿನ ಮತದಾರರಿಗೆ ಸಿಹಿ ಸುದ್ದಿ ನೀಡಿದ ನಮ್ಮ ಮೆಟ್ರೋ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರದ ಶೀರ್ಷಿಕೆ ಸ್ವಾಮೀಜಿ; ಟ್ಯಾಗ್ ಲೈನ್ ನಿತ್ಯಾನಂದ!
ಹ್ಯಾಸ ನಟ, ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕ ಸಾಧು ಕೋಕಿಲ ಸ್ವಾಮೀಜಿಯಾಗಿದ್ದಾರೆ! ಆದರೆ ನಿಜ ಜೀವನದಲ್ಲಿ ಅಲ್ಲ ತೆರೆಯ ಮೇಲೆ. ಸ್ವಾಮಿ ನಿತ್ಯಾನಂದ ಪ್ರಕರಣ ಬಯಲಾಗುತ್ತಿದ್ದಂತೆ ಚಿತ್ರರಂಗದ ಕಣ್ಣು ಸ್ವಾಮೀಜಿಗಳ ಮೇಲೆ ಬಿದ್ದಿದೆ. ಹಾಗಾಗಿ ಸಾಧು ಕೋಕಿಲ ತಮ್ಮ ಹೊಸ ಚಿತ್ರಕ್ಕೆ 'ಸ್ವಾಮೀಜಿ' ಎಂದು ಹೆಸರಿಟ್ಟಿದ್ದಾರೆ.
ಏತನ್ಮಧ್ಯೆ ಸಾಧು ಕೋಕಿಲ ನಿರ್ದೇಶನದ ಎರಡು ಚಿತ್ರಗಳು ತೆರೆಗೆ ಅಪ್ಪಳಿಸಲು ಸಿದ್ಧವಾಗಿವೆ. ಒಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಶೌರ್ಯ ಹಾಗೂ ಮತ್ತೊಂದು ಕಿಚ್ಚ ಸುದೀಪ್ ಅಭಿನಯದ ತೀರ್ಥ. ಸಾಧು ಹೊಸದಾಗಿ ಕೈಗೆತ್ತಿಕೊಂಡಿರುವ ಸ್ವಾಮೀಜಿ ಚಿತ್ರದ ಟ್ಯಾಗ್ ಲೈನ್ ಏನು ಗೊತ್ತೆ? ನಿತ್ಯಾನಂದ!
ಸ್ವಾಮೀಜಿ ಚಿತ್ರದ ಮೂಲಕ ಸಾಧು ಮತ್ತೊಂದು ಸಾಹಸ ಕೈಹಾಕಿದ್ದು ಚಿತ್ರವನ್ನು ಅವರೇ ನಿರ್ಮಿಸಲಿದ್ದಾರೆ. ಒಟ್ಟಿನಲ್ಲಿ ಇದೊಂದು ಹಾಸ್ಯ ಪ್ರಧಾನ ಚಿತ್ರ ಎಂಬುದು ಪಕ್ಕಾ ಆಗಿದೆ. ತಾರಾಗಣದಲ್ಲಿ ರಂಗಾಯಣ ರಘು, ಬುಲೆಟ್ ಪ್ರಕಾಶ್, ಕೋಮಲ್ ಕುಮಾರ್ ಮುಂತಾದವರಿದ್ದಾರೆ. ದಿಗಂತ್ ಮತ್ತು ಪ್ರಜ್ಞಾ ಚಿತ್ರದ ಮುಖ್ಯ ಪಾತ್ರಧಾರಿಗಳು.