Don't Miss!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾವಣನಿಗೆ ದಕ್ಕಲಿಲ್ಲ ಅಧರಾಮೃತದ ಸಿಹಿ!
ನಟ ಸಂತೋಷ್ ಅವರನ್ನು ಉತ್ತಮ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ನಾಗತಿಹಳ್ಳಿ ಚಂದ್ರಶೇಖರ್ ಅವರ ಹೊಸ ಚಿತ್ರದಲ್ಲಿ ನಾಯಕ ನಟನೂ ಆಗಿರುವ ಸಂತೋಷ್ ಕನಸುಗಳು ಒಂದೊಂದೇ ಅರಳ ತೊಡಗಿವೆ. ಇದೀಗ ಎರಡನೇ ನಾಯಕ ನಟನಾಗಿ ಅಭಿನಯಿಸಿರುವ 'ರಾವಣ' ಚಿತ್ರ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ.
ರಾವಣ ಚಿತ್ರದ ಮುಖ್ಯ ಪಾತ್ರಧಾರಿ ಯೋಗೀಶ್ ಅಲಿಯಾಸ್ ಲೂಸ್ ಮಾದ ಎಂಬುದು ಗೊತ್ತೇ ಇದೆ. ಈ ಚಿತ್ರದಲ್ಲಿ ಸಂತೋಷ್ ಮುಖ್ಯಪಾತ್ರದಲ್ಲಿ ನಟಿಸಿರುವುದು ವಿಶೇಷ. ರಾವಣ ಚಿತ್ರದ ನಾಯಕಿ ಸಂಚಿತಾ ಪಡುಕೋಣೆ ಗೆಳೆಯನಾಗಿ ಸಂತೋಷ್ ಕಾಣಿಸಲಿದ್ದಾರೆ.
ಚಿತ್ರದ ನಾಯಕಿಗೆ ತುಟಿಗೆ ತುಟಿ ಒತ್ತಿ ಚುಂಚಿಸುವ ದೃಶ್ಯವೊಂದಿದೆ. ಈ ಅಧರಾಮೃತ ಸವಿಯುವ ಅದೃಷ್ಟ ಚಿತ್ರದ ನಾಯಕ ನಟ ಯೋಗೀಶ್ ಗೆ ಒಲಿಯದೆ ಎರಡನೇ ನಾಯಕ ನಟ ಸಂತೋಷ್ ಗೆ ಒಲಿದಿದೆ. ತಮಿಳಿನ ಕಾದಲ್ ಕೊಂಡೇನ್ ಚಿತ್ರ ರೀಮೇಕ್ 'ರಾವಣ'. ಚಿತ್ರದ ಹಾಡೊಂದರಲ್ಲೂ ಸಂತೋಷ್ ನಾಯಕಿಯೊಂದಿಗೆ ಕುಣಿದಿದ್ದಾರೆ.
ಮೂಲ ಚಿತ್ರಕ್ಕೆ ಹೋಲಿಸಿದರೆ ರಾವಣ ಚಿತ್ರದಲ್ಲಿ ಸಂತೋಷ್ ಗೆ ಉತ್ತಮ ಪಾತ್ರ ದೊರೆತಿರುವ ಬಗ್ಗೆ ಗಾಂಧಿನಗರದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ರಾವಣ ಚಿತ್ರದಲ್ಲಿ ''ನಿನ್ನ ಮನೆವರೆಗೂ...''ಹಾಗೂ ''ಚಕ್ಲಿ ನಿಪ್ಪಟ್ಟು...'' ಎಂಬ ಹಾಡುಗಳು ಈಗಾಗಲೇ ಹಿಟ್ ಆಗಿವೆ. ಪ್ರೇಕ್ಷಕರ ಬಾಯಲಿ ಚಿತ್ರದ ಹಾಡುಗಳು ನಲಿದಾಡುತ್ತಿರುವುದೇ ಇದಕ್ಕೆ ಸಾಕ್ಷಿ.
ಯೋಗೀಶ್ ನಟನೆಯ ಚಿತ್ರಗಳ ಪೈಕಿ ಈ ಚಿತ್ರ ಸೂಪರ್ ಡೂಪರ್ ಹಿಟ್ ಆಗಲಿದೆ ಎಂಬ ವಿಶ್ವಾಸ ಈಗಾಗಲೇ ವ್ಯಕ್ತವಾಗಿದೆ. ರಾವಣ ಚಿತ್ರ ಯೋಗಿಗೆ ಹೊಸ ತಿರುವು ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಅಂದಹಾಗೆ ಈ ಶುಕ್ರವಾರ (ಡಿಸೆಂಬರ್ 4) ರಾವಣ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂಬುದು ನಿಮ್ಮ ಗಮನಕ್ಕಿರಲಿ.
(ದಟ್ಸ್ ಕನ್ನಡ ಚಿತ್ರವಾರ್ತೆ)