Don't Miss!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- News ಬೆಂಗಳೂರಿನ ಜನತೆಗೆ ಬಾಂಬು..ಮತಾಂಧರಿಗೆ ಕೊಂಬು: ಚೊಂಬು ಜಾಹೀರಾತಿಗೆ ಆರ್.ಅಶೋಕ್ ಗುಡುಗು
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸೆಂಟ್ರಲ್ ಜೈಲ್'ನಲ್ಲಿ ಒಲವೇ ಮಂದಾರ ಶ್ರೀಕರ್
'ಒಲವೇ ಮಂದಾರ' ಚಿತ್ರದ ಮೂಲಕ ಗಮನಸೆಳೆದ ನಾಯಕ ನಟ ಶ್ರೀಕಿ (ಶ್ರೀಕರ್) 'ಸೆಂಟ್ರಲ್ ಜೈಲು' ಸೇರಿದ್ದಾರೆ. ಆದರೆ ಶ್ರೀಕಿ ಜೈಲು ಸೇರುವಂತಹ ತಪ್ಪೇನು ಮಾಡಿಲ್ಲ. ಅವರು ಅಭಿನಯಿಸುತ್ತಿರುವ ಚಿತ್ರದ ಹೆಸರೇ ಸೆಂಟ್ರಲ್ ಜೈಲ್!
ಚಿತ್ರದ ನಾಯಕ ಯಾವುದೋ ಕಾರಣಕ್ಕಾಗಿ ಜೈಲು ಸೇರಿರುತ್ತಾನೆ. ಜೈಲಿನಲ್ಲಿ ಆತನಿಗೆ ವ್ಯಕ್ತಿಯೋರ್ವನ ಪರಿಚಯವಾಗುತ್ತದೆ. ಜೈಲಿನಿಂದ ಬಂದ ತಕ್ಷಣ ನಾಯಕ ತಾನು ಜೈಲಿಗೆ ಹೋಗಲು ಕಾರಣನಾದವನ ಜೊತೆ ಹೊಡೆದಾಡುತ್ತಾನೆ. ಈ ಸನ್ನಿವೇಶವನ್ನು ತಾವರಕೆರೆ ಭೂತಬಂಗಲೆಯಲ್ಲಿ ಶ್ರೀಪ್ರೊಡಕ್ಷನ್ ಲಾಂಛನದಲ್ಲಿ ಜಾನಕೀರಾಂ ಅವರು ನಿರ್ಮಿಸುತ್ತಿರುವ ಸೆಂಟ್ರಲ್ ಜೈಲ್ ಚಿತ್ರಕ್ಕಾಗಿ ನಿರ್ದೇಶಕ ಬಲರಾಂ ಚಿತ್ರಿಸಿಕೊಂಡರು.
ಶ್ರೀಕಾಂತ್, ನೀನಾಸಂ ಅಶ್ವತ್, ಶರತ್ ಲೋಹಿತಾಶ್ವಾ ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ವಿ.ಮನೋಹರ್ ಸಂಗೀತವಿರುವ ಈ ಚಿತ್ರಕ್ಕೆ ಜನಾರ್ದನ್ ಅವರ ಛಾಯಾಗ್ರಹಣವಿದೆ. ಶ್ಯಾಂ ಸಂಕಲನಕಾರರಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಶ್ರೀಕಾಂತ್, ಗಮ್ಯ, ಶರತ್ಲೋಹಿತಾಶ್ವಾ, ವಿನಯಾಪ್ರಸಾದ್, ನಿನಾಸಂ ಅಶ್ವತ್, ಹರೀಶ್ ರಾಯ್ ಮುಂತಾದವರಿದ್ದಾರೆ. (ಒನ್ಇಂಡಿಯಾ ಕನ್ನಡ)