Don't Miss!
- Lifestyle 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೀರ್ಥಹಳ್ಳಿಗೆ ಪಾದ ಬೆಳೆಸಿದ ಪವರ್ ಸ್ಟಾರ್ ಪರಮಾತ್ಮ
ಯೋಗರಾಜ್ ಭಟ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ಚಿತ್ರ ಪರಮಾತ್ಮ ಚಿತ್ರೀಕರಣ ಭರದಿಂದ ಸಾಗಿದೆ. ಚಿತ್ರಕ್ಕೆ ಗ್ರಾಫಿಕ್ಸ್ ಅಳವಡಿಕೆ ಕಾರ್ಯ ನಡೆಯುತ್ತಿದ್ದು ಅದಾದ ಕೂಡಲೆ ಪುನೀತ್ ಪುನಃ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ಚಲನಚಿತ್ರ ವಿತರಕ ಜಯಣ್ಣ ಹಾಗೂ ಯೋಗರಾಜ್ ಭಟ್ ಜಂಟಿಯಾಗಿ ನಿರ್ಮಿಸುತ್ತಿರುವ ಚಿತ್ರ ಇದಾಗಿದೆ.
ಈಗಾಗಲೆ ಸಕಲೇಶಪುರ ಹಾಗೂ ಮಣಿಪಾಲದಲ್ಲಿ ಪರಮಾತ್ಮ ಏಳು ದಿನಗಳ ಚಿತ್ರೀಕರಣ ಮುಗಿಸಿಕೊಂಡಿದ್ದಾನೆ. ಶೀಘ್ರದಲ್ಲೇ ತೀರ್ಥಹಳ್ಳಿಗೆ ಪರಮಾತ್ಮ ಪಾದಬೆಳೆಸಲಿದ್ದಾನೆ. ಅಲ್ಲಿನ ಸುಂದರ ತಾಣಗಳಲ್ಲಿ ಪರಮಾತ್ಮನ ಬಹುತೇಕ ಭಾಗದ ಚಿತ್ರೀಕರಣ ನಡೆಯಲಿದೆ. ಪುನೀತ್ ಹಾಗೂ ದೀಪಾ ಸನ್ನಿದ್ಧಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ತೀರ್ಥಹಳ್ಳಿಯಲ್ಲಿ ನಡೆಯುವ ಚಿತ್ರೀಕರಣಕ್ಕೆ ಐಂದ್ರಿತಾ ರೇ ಹಾಗೂ ರಮ್ಯಾ ಬಾರ್ನಾ ಸೇರ್ಪಡೆಯಾಗಲಿದ್ದಾರೆ. ಪರಮಾತ್ಮ ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣ ಹಾಗೂ ವಿ ಹರಿಕೃಷ್ಣ ಅವರ ಸಂಗೀತವಿದೆ. ಚಿತ್ರದ ತಾರಾಬಳಗದಲ್ಲಿ ಭಟ್ಟರ ಫೇವರೇಟ್ ತಾರೆಗಳಾದ ರಂಗಾಯಣ ರಘು, ಅನಂತನಾಗ್ ಇದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಸಾಹಿತ್ಯ ಚಿತ್ರಕ್ಕಿದೆ.