Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಯಾಂಡಲ್ ವುಡ್ ನ ಚುಟುಕು ಸುದ್ದಿಗಳು
ಇತ್ತೀಚೆಗಷ್ಟೆ 'ಕರಿ ಚಿರತೆ' ಚಿತ್ರತಂಡಮೈಸೂರಿನಿಂದ ಹಿಂತಿರುಗಿದೆ. ಹೊಡೆದಾಟದ ದೃಶ್ಯಗಳಲ್ಲಿ ಭಾಗವಹಿಸಿದ್ದ ಚಿತ್ರದನಾಯಕ ನಟ ವಿಜಯ್ ಸುಸ್ತಾಗಿದ್ದಾರಂತೆ. ಸದ್ಯಕ್ಕೆ ಆಶ್ರಮವೊಂದರಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವುದಾಗಿ ವಿಜಯ್ ತಿಳಿಸಿದ್ದಾರೆ. ಶರ್ಮಿಳಾ ಮಾಂಡ್ರೆ ಈ ಚಿತ್ರದ ನಾಯಕಿ.
**
ಜಸ್ಟ್ ಮಾತ್ ಮಾತಲ್ಲಿ ಚಿತ್ರ ಸಿಂಗಪುರಕ್ಕೆ ತೆರಳಿದೆ. ಅಂತಿಮ ಚಿತ್ರೀಕರಣವನ್ನು ಮುಗಿಸಿಕೊಂಡು ಶೀಘ್ರದಲ್ಲೇ ಚಿತ್ರತಂಡ ಹಿಂತಿರುಗಲಿದೆ. ಮುಖ್ಯವಾದ ಸಮಾಚಾರವೆಂದರೆ ನಟಿ ರಮ್ಯಾ ಅವರನ್ನು ಸಿಂಗಪುರ ಚಿತ್ರೀಕರಣದಿಂದ ಕೈಬಿಡಲಾಗಿದೆ. ಆದರೆ ರಮ್ಯಾ ಈ ಬಗ್ಗೆ ಪ್ರತಿಕ್ರಿಯಿಸಿಲ್ಲ.
**
'ಮನಸಾರೆ' ಚಿತ್ರದ ಬಿಡುಗಡೆ ನಂತರ ಆ ಚಿತ್ರದ ನಾಯಕಿ ಐಂದ್ರಿತಾ ರೇ ಹದಿನೈದು ದಿನಗಳ ಕಾಲ ರಜೆ ಘೋಷಿಸಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ವಿಶ್ರಾಂತಿ ನಂತರ ಅವರು ಕ್ಯೂಪಾ (Compassion Unlimited Plus Action) ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಧೂಳ್ ಮತ್ತು ನೂರು ಜನ್ಮಕೂ ಚಿತ್ರೀಕರಣದಲ್ಲೂ ಪಾಲ್ಗೊಳ್ಳಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)