Don't Miss!
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಯಾಂಡಲ್ ವುಡ್ ನ ಚುಟುಕು ಸುದ್ದಿಗಳು
ಇತ್ತೀಚೆಗಷ್ಟೆ 'ಕರಿ ಚಿರತೆ' ಚಿತ್ರತಂಡಮೈಸೂರಿನಿಂದ ಹಿಂತಿರುಗಿದೆ. ಹೊಡೆದಾಟದ ದೃಶ್ಯಗಳಲ್ಲಿ ಭಾಗವಹಿಸಿದ್ದ ಚಿತ್ರದನಾಯಕ ನಟ ವಿಜಯ್ ಸುಸ್ತಾಗಿದ್ದಾರಂತೆ. ಸದ್ಯಕ್ಕೆ ಆಶ್ರಮವೊಂದರಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವುದಾಗಿ ವಿಜಯ್ ತಿಳಿಸಿದ್ದಾರೆ. ಶರ್ಮಿಳಾ ಮಾಂಡ್ರೆ ಈ ಚಿತ್ರದ ನಾಯಕಿ.
**
ಜಸ್ಟ್ ಮಾತ್ ಮಾತಲ್ಲಿ ಚಿತ್ರ ಸಿಂಗಪುರಕ್ಕೆ ತೆರಳಿದೆ. ಅಂತಿಮ ಚಿತ್ರೀಕರಣವನ್ನು ಮುಗಿಸಿಕೊಂಡು ಶೀಘ್ರದಲ್ಲೇ ಚಿತ್ರತಂಡ ಹಿಂತಿರುಗಲಿದೆ. ಮುಖ್ಯವಾದ ಸಮಾಚಾರವೆಂದರೆ ನಟಿ ರಮ್ಯಾ ಅವರನ್ನು ಸಿಂಗಪುರ ಚಿತ್ರೀಕರಣದಿಂದ ಕೈಬಿಡಲಾಗಿದೆ. ಆದರೆ ರಮ್ಯಾ ಈ ಬಗ್ಗೆ ಪ್ರತಿಕ್ರಿಯಿಸಿಲ್ಲ.
**
'ಮನಸಾರೆ' ಚಿತ್ರದ ಬಿಡುಗಡೆ ನಂತರ ಆ ಚಿತ್ರದ ನಾಯಕಿ ಐಂದ್ರಿತಾ ರೇ ಹದಿನೈದು ದಿನಗಳ ಕಾಲ ರಜೆ ಘೋಷಿಸಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ವಿಶ್ರಾಂತಿ ನಂತರ ಅವರು ಕ್ಯೂಪಾ (Compassion Unlimited Plus Action) ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಧೂಳ್ ಮತ್ತು ನೂರು ಜನ್ಮಕೂ ಚಿತ್ರೀಕರಣದಲ್ಲೂ ಪಾಲ್ಗೊಳ್ಳಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)