Don't Miss!
- News HSRP; ಸಾರಿಗೆ ಇಲಾಖೆಯಿಂದ ಮಹತ್ವದ ಮಾಹಿತಿ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು ನಿಧನಕ್ಕೆ ನಿಮ್ಮ ಕಂಬನಿ
ಕನ್ನಡ ತೆರೆಯ ಹಿರಿಯ ಕಲಾವಿದ ಡಾ. ವಿಷ್ಣುವರ್ಧನ್ ಬುಧವಾರ ಮುಂಜಾನೆ ಮೈಸೂರಿನಲ್ಲಿ ನಿಧನರಾದರು. ಅವರ ನಿಧನದೊಂದಿಗೆ ಕನ್ನಡ ಚಿತ್ರರಂಗವನ್ನು ಬೆಳಗಿದ ಹಿರಿಯ ನಾಯಕ ನಟನೊಬ್ಬನನ್ನು ಕಳೆದುಕೊಂಡಂತಾಗಿದೆ. ಬುಧವಾರ ರಾತ್ರಿ ಹೃದಯಾಘಾತಕ್ಕೆ ಈಡಾದ ವಿಷ್ಣು ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆಗಳು ಫಲಕಾರಿಯಾಗದೆ ನಸುಕಿನ 2.30ಕ್ಕೆ ಅವರು ಕೊನೆಯುಸಿರೆಳೆದರು.
ಇದು ಚಿತ್ರರಂಗಕ್ಕೆ ಮಾತ್ರವಲ್ಲ ಕನ್ನಡ ಚಿತ್ರರಂಗವನ್ನು ಪ್ರೀತಿಸಿದ ಪ್ರತಿಯೊಬ್ಬರಿಗೂ ತುಂಬಲಾರದ ನಷ್ಟ. ಬೆಂಗಳೂರಿನ ಜಯನಗರ ನಾಲ್ಕನೇ ಟಿ ಬ್ಲಾಕಿನಲ್ಲಿರುವ ವಿಷ್ಣು ಗೃಹದಲ್ಲಿ ಅವರ ಪಾರ್ಥೀವ ಶರೀರವನ್ನು ಇಡಲಾಗಿತ್ತು. ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪಾರ್ಥೀವ ಶರೀರವನ್ನು ಬಸವನಗುಡಿ ನ್ಯಾಶನಲ್ ಕಾಲೇಜು ಮೈದಾನಕ್ಕೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗಿದೆ. ಸಂಜೆ ನಾಲ್ಕು ಗಂಟೆಯವರೆಗೆ ಅಂತಿಮ ದರ್ಶನ ಅಭಿಮಾನಿಗಳು ಪಡೆಯಬಹುದು. ನಾಲ್ಕರ ನಂತರ ಅಭಿಮಾನ್ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು.
ಅಭಿಮಾನಿಗಳು ಶಾಂತಿಯಿಂದ ವರ್ತಿಸಬೇಕೆಂದು ಅವರ ಪತ್ನಿ ಭಾರತಿ ವಿಷ್ಣುವರ್ಧನ್ ಕೋರಿದ್ದಾರೆ. ಅಗಲಿದ ಅಪ್ರತಿಮ ಕಲಾವಿದನಿಗೆ ಶ್ರದ್ಧಾಂಜಲಿ ಸಲ್ಲಿಸಲು ಇಡೀ ಕನ್ನಡ ಚಿತ್ರೋದ್ಯಮ ಹರಿದುಬರುತ್ತಿದೆ. ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ರಾಮಾಚಾರಿ, ಸಾಹಸಸಿಂಹ, ಯಜಮಾನ ವಿಷ್ಣುವರ್ಧನ್ ಅವರಿಗೆ ನಿಮ್ಮ ಕಂಬನಿ ಮಿಡಿಯಲು ಮತ್ತು ಕುಟುಂಬಕ್ಕೆ ಸಂತಾಪ ಸೂಚಿಸಲು ಅನಿಸಿಕೆಗಳನ್ನು ಇಲ್ಲಿ ದಾಖಲಿಸಿ.