Don't Miss!
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರು : ವಿಷ್ಣು ಅಭಿಮಾನಿ ಆತ್ಮಹತ್ಯೆ
ಸೋಮಣ್ಣ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕುನ್ನಯ ಎಂಬಾತ ಆತನನ್ನು ರಕ್ಷಿಸಲು ಹೋಗಿ ನೀರು ಪಾಲಾದ ನತದೃಷ್ಟ. ವಿಷ್ಣು ವಿಧಿವಶದ ಸುದ್ದಿ ತಿಳಿಯುತ್ತಿದ್ದಂತೆಯೇ ತೀವ್ರ ಬೇಸರವಾಗಿ ಸೋಮಣ್ಣ ಬೆಳಗ್ಗೆಯಿಂದಲೇ ಮಧ್ಯಪಾನ ಸೇವಿಸಿದ್ದ. ನನ್ನ ನೆಚ್ಚಿನ ನಾಯಕ ಇನ್ನಿಲ್ಲ ಎಂಬುದೇ ಈ ಸೋಮಣ್ಣ ಎಂಬ ಹುಚ್ಚು ಅಭಿಮಾನಿಗೆ ತಡೆದುಕೊಳ್ಳುವ ಶಕ್ತಿ ಇರಲಿಲ್ಲ. ವಿಷ್ಣುವರ್ಧನ್ ಇಲ್ಲ ಅಂದ ಮೇಲೆ ನಾನೇಕೆ ಇರುವುದು ಎಂದು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೋಮಣ್ಣನ ಸ್ನೇಹಿತ ಎನ್ನಲಾದ ಕುನ್ನಯ್ಯ ಆತನನ್ನು ರಕ್ಷಿಸಲು ಹೋಗಿ ನೀರು ಪಾಲಾಗಿರುವುದು ದುರದೃಷ್ಟಕರ ಸಂಗತಿಯಾಗಿದೆ.
ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಪರಿಸ್ಥಿತಿ ಸಂಪೂರ್ಣ ಉದ್ರಿಕ್ತಗೊಂಡಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ. ಬೈಕ್ ಗೆ ಬೆಂಕಿ ಹಚ್ಚಿದ ಅಭಿಮಾನಿಗಳು, ದಾಂಧಲೆ ಮುಂದುವರಿಸಿದ್ದಾರೆ. 8000 ಪೊಲೀಸರು ಬಂದೋಬಸ್ತ್ ಗೆ ನಿಯೋಜಿಸಲಾಗಿದ್ದು. ಮೂರೂವರೆ ಲಕ್ಷ ಅಭಿಮಾನಿಗಳು ಅಂತಿಮ ದರುಶನಕ್ಕೆ ಜಮಾಯಿಸಿದ್ದಾರೆ. ವಿಷ್ಣು ಅಂತಿಮ ದರುಶನಕ್ಕೆ 2 ಮೈಲಿ ಉದ್ದ ಸಾಲನ್ನು ನ್ಯಾಷನಲ್ ಮೈದಾನದ ಮುಂದೆ ಕಾಣಬಹುದು.