Don't Miss!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಂಠೀರವದಲ್ಲಿ ರಾಜ್, ಅಭಿಮಾನ್ ದಲ್ಲಿ ವಿಷ್ಣು
ನಟಸಾರ್ವಭೌಮ ಡಾ ರಾಜ್ ಕುಮಾರ್ ತೀರಿ ಹೋದಾಗಲೂ ಅವರ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕು ಎಂದು ಜಿಜ್ಞಾಸೆ ತಲೆದೋರಿತ್ತು. ಬಹುದೊಡ್ಡ ಅಭಿಮಾನಿ ಬಳಗ ಹೊಂದಿದ್ದ ರಾಜ್ ಕುಮಾರ್ ಅವರ ಅಂತ್ಯಕ್ರಿಯೆವನ್ನು ಅಂದಿನ ಸರಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ ಧರ್ಮಪತ್ನಿ ಪಾರ್ವತಮ್ಮ ಅವರೊಂದಿಗೆ ಚರ್ಚಿಸಿ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯ ನಡೆಸಲು ಅಂತಿಮ ತೀರ್ಮಾನ ಕೈಗೊಳ್ಳಲಾಯಿತು. ಇದೀಗ ಸಾಹಸಸಿಂಹ ವಿಷ್ಣವರ್ಧನ್ ಅವರ ಸರದಿ. ವಿಷ್ಣು ಕೂಡಾ ರಾಜ್ಯಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಅಭಿಮಾನಿಗಳು ಹಿತೈಷಿಗಳು ಹಾಗೂ ಕುಟುಂಬ ವರ್ಗದ ಆಶಯದಂತೆ ಸರಕಾರ ನಡೆದುಕೊಳ್ಳಬೇಕಿರುವುದು ಅವಶ್ಯವಾಗಿದೆ.
ಇದಕ್ಕೂ ಮುಂಚೆ ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆಯನ್ನು ಬನಶಂಕರಿ ಚಿತಾಗಾರದಲ್ಲಿ ನಡೆಸಲು ಅವರ ಕುಟುಂಬ ವರ್ಗ ನಿರ್ಧರಿಸಿತ್ತು. ಆದರೆ, ವಿಷ್ಣು ಅಭಿಮಾನಿಗಳು ಕಂಠೀರವ ಸ್ಟುಡಿಯೋ ಮತ್ತು ಅಭಿಮಾನ್ ಸ್ಟುಡಿಯೋದಲ್ಲಿ ತಮ್ಮ ನೆಚ್ಚಿನ ನಾಯಕನ ಅಂತ್ಯಕ್ರಿಯೆ ನಡೆಯಬೇಕು ಎಂದು ಪಟ್ಟುಹಿಡಿದರು. ಆಗ ವಿಷ್ಣು ಪತ್ನಿ ಭಾರತಿ ಅವರೊಂದಿಗೆ ಚರ್ಚೆ ನಡೆಸಿದ ಹಿರಿಯ ನಟ ಅಂಬರೀಷ್ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಅಂತ್ಯಕ್ರಿಯೆ ನಡೆಯುವ ಸಂಗತಿಯನ್ನು ಅವರ ಸ್ಪಷ್ಟಪಡಿಸಿದರು. ಈ ವಿಷಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ ಅಂಬರೀಷ್, ಅಬಿಮಾನ್ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನಡೆಯುವುದನ್ನು ಖಚಿತಪಡಿಸಿದರು.
ಎಚ್ ಡಿ ಕುಮಾರಸ್ವಾಮಿ ಅಸಮಾಧಾನ
ಸರಿ ಸುಮಾರು 30 ವರ್ಷಗಳ ಕಾಲ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ ಹಿರಿಯ ನಟನಿಗೆ ಎಲ್ಲೂ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸುವುದು ಸರಿಯಲ್ಲ. ವಿಷ್ಣುವರ್ಧನ್ ಅವರು ರಾಜ್ಯಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಅಶಯದಂತೆ ವಿಷ್ಣು ಅವರ ಅಂತ್ಯಕ್ರಿಯೆ ನಡೆಯಬೇಕು. ವಿಷ್ಣು ಸಾರ್ವಜನಿಕ ವ್ಯಕ್ತಿ, ಕುಟುಂಬದ ಅನುಮತಿ ಪಡೆದು ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯ ನಡೆಸಬೇಕು. ಅಭಿಮಾನ್ ಸ್ಟುಡಿಯೋದಲ್ಲಿ ನೆರವೇರಿಸುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಎಚ್ ಡಿ ಕುಮಾರಸ್ವಾಮಿ ನಿರ್ಮಾಣದ ಸೂರ್ಯವಂಶ ಚಿತ್ರದಲ್ಲಿ ವಿಷ್ಣುವರ್ಧನ್ ನಾಯಕ ನಟರಾಗಿ ಅಭಿನಯಿಸಿದ್ದರು.