Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾಂತಿ ಕಾಪಾಡಿ, ಸಿಎಂ, ಭಾರತಿ
ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ವಿಷ್ಣುವರ್ಧನ್ ಅವರ ಹೆಸರಿನಲ್ಲಿ ಶಾಶ್ವತ ಕಾರ್ಯಕ್ರಮ ಸರಕಾರ ವತಿಯಿಂದ ಹಮ್ಮಿಕೊಳ್ಳಲಾಗುವುದು. ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ನಡೆಸಿಕೊಡಲು ನಿರ್ಧರಿಸಲಾಗಿದೆ. ಎಲ್ಲರೂ ಶಾಂತಿ ಕಾಪಾಡಬೇಕು ಎಂದು ಹೇಳಿದರು.
ವಿಷ್ಣುವರ್ಧನ್ ಗೆ ಅಭಿಮಾನಿಗಳ ಬಗ್ಗೆ ಅಪಾರ ಗೌರವ ಮತ್ತು ಅಭಿಮಾನವಿತ್ತು. ಅವರ ನಮ್ಮೊಂದಿಗಿಲ್ಲ. ಅವರನ್ನು ಶಾಂತಿಯುತವಾಗಿ ಕಳುಹಿಸಿಕೊಡಬೇಕಿದೆ. ಅಭಿಮಾನಿಗಳಲ್ಲಿ ಅಪಾರ ಗೌರವ ಹೊಂದಿರುವ ಅವರಿಗೆ ನಿಮ್ಮ ಸಹಕಾರ ಅಗತ್ಯ. ಯಾರೂ ಕೂಡಾ ಗಲಾಟೆ ಮಾಡದೆ, ಅವರನ್ನು ಶಾಂತಿಯಿಂದ ಕಳುಹಿಕೊಡೋಣ ಎಂದು ವಿಷ್ಣುವರ್ಧನ್ ಪತ್ನಿ ಭಾರತಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕನ್ನಡ ಚಿತ್ರರಂಗದ ಜನನಾಯಕ ವಿಷ್ಣುವರ್ಧನ್ ಅವರ ಅಕಾಲಿಕ ಮರಣವನ್ನು ಭರಿಸಲು ಅಸಾಧ್ಯ. ಕನ್ನಡ ಚಿತ್ರರಂಗದ ಅನೇಕ ಗಣ್ಯರು ಸಾಹಸಸಿಂಹನ ಅನಿರೀಕ್ಷಿತ ಸಾವಿಗೆ ಕಂಬನಿ ಮಿಡಿಯುತ್ತಿದೆ. 200 ಚಿತ್ರಗಳಲ್ಲಿ ಅಭಿನಯಿಸಿ ಕನ್ನಡದ ಅಮರ ಕಲಾವಿದನಾಗಿರುವ ವಿಷ್ಣುವರ್ಧನ್ 59ನೇ ವರ್ಷದಲ್ಲಿ ಸಾವಿಗೆ ಶರಣಾಗಿರುವುದು ವಿಪರ್ಯಾಸದ ಸಂಗತಿ.