twitter
    For Quick Alerts
    ALLOW NOTIFICATIONS  
    For Daily Alerts

    ಶಾಂತಿ ಕಾಪಾಡಿ, ಸಿಎಂ, ಭಾರತಿ

    By Staff
    |

    Yeddyurappa
    ಬೆಂಗಳೂರು, ಡಿ. 30 : ಜನನಾಯಕ ವಿಷ್ಣುವರ್ಧನ್ ಅವರ ನಿಧನದಿಂದ ತುಂಬಾ ನೋವಾಗಿದೆ. ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಅಗಲಿಕೆ ನಮಗೆ ಭರಿಸಲಾರದ ಆಘಾತವಾಗಿದೆ. ಸ್ನೇಹ ಜೀವಿ, ಶಾಂತಿ ಪ್ರಿಯರಾಗಿದ್ದ ಅವರ ಅಂತ್ಯಕ್ರಿಯೆ ಶಾಂತಿ ಮೂಲಕ ಆಚರಿಸೋಣ. ಅಭಿಮಾನಿಗಳು ಶಾಂತಿ, ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

    ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ವಿಷ್ಣುವರ್ಧನ್ ಅವರ ಹೆಸರಿನಲ್ಲಿ ಶಾಶ್ವತ ಕಾರ್ಯಕ್ರಮ ಸರಕಾರ ವತಿಯಿಂದ ಹಮ್ಮಿಕೊಳ್ಳಲಾಗುವುದು. ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ನಡೆಸಿಕೊಡಲು ನಿರ್ಧರಿಸಲಾಗಿದೆ. ಎಲ್ಲರೂ ಶಾಂತಿ ಕಾಪಾಡಬೇಕು ಎಂದು ಹೇಳಿದರು.

    ವಿಷ್ಣುವರ್ಧನ್ ಗೆ ಅಭಿಮಾನಿಗಳ ಬಗ್ಗೆ ಅಪಾರ ಗೌರವ ಮತ್ತು ಅಭಿಮಾನವಿತ್ತು. ಅವರ ನಮ್ಮೊಂದಿಗಿಲ್ಲ. ಅವರನ್ನು ಶಾಂತಿಯುತವಾಗಿ ಕಳುಹಿಸಿಕೊಡಬೇಕಿದೆ. ಅಭಿಮಾನಿಗಳಲ್ಲಿ ಅಪಾರ ಗೌರವ ಹೊಂದಿರುವ ಅವರಿಗೆ ನಿಮ್ಮ ಸಹಕಾರ ಅಗತ್ಯ. ಯಾರೂ ಕೂಡಾ ಗಲಾಟೆ ಮಾಡದೆ, ಅವರನ್ನು ಶಾಂತಿಯಿಂದ ಕಳುಹಿಕೊಡೋಣ ಎಂದು ವಿಷ್ಣುವರ್ಧನ್ ಪತ್ನಿ ಭಾರತಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಕನ್ನಡ ಚಿತ್ರರಂಗದ ಜನನಾಯಕ ವಿಷ್ಣುವರ್ಧನ್ ಅವರ ಅಕಾಲಿಕ ಮರಣವನ್ನು ಭರಿಸಲು ಅಸಾಧ್ಯ. ಕನ್ನಡ ಚಿತ್ರರಂಗದ ಅನೇಕ ಗಣ್ಯರು ಸಾಹಸಸಿಂಹನ ಅನಿರೀಕ್ಷಿತ ಸಾವಿಗೆ ಕಂಬನಿ ಮಿಡಿಯುತ್ತಿದೆ. 200 ಚಿತ್ರಗಳಲ್ಲಿ ಅಭಿನಯಿಸಿ ಕನ್ನಡದ ಅಮರ ಕಲಾವಿದನಾಗಿರುವ ವಿಷ್ಣುವರ್ಧನ್ 59ನೇ ವರ್ಷದಲ್ಲಿ ಸಾವಿಗೆ ಶರಣಾಗಿರುವುದು ವಿಪರ್ಯಾಸದ ಸಂಗತಿ.

    Wednesday, December 30, 2009, 17:52
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X