Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾಂತಿ ಕಾಪಾಡಿ, ಸಿಎಂ, ಭಾರತಿ
ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ವಿಷ್ಣುವರ್ಧನ್ ಅವರ ಹೆಸರಿನಲ್ಲಿ ಶಾಶ್ವತ ಕಾರ್ಯಕ್ರಮ ಸರಕಾರ ವತಿಯಿಂದ ಹಮ್ಮಿಕೊಳ್ಳಲಾಗುವುದು. ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ನಡೆಸಿಕೊಡಲು ನಿರ್ಧರಿಸಲಾಗಿದೆ. ಎಲ್ಲರೂ ಶಾಂತಿ ಕಾಪಾಡಬೇಕು ಎಂದು ಹೇಳಿದರು.
ವಿಷ್ಣುವರ್ಧನ್ ಗೆ ಅಭಿಮಾನಿಗಳ ಬಗ್ಗೆ ಅಪಾರ ಗೌರವ ಮತ್ತು ಅಭಿಮಾನವಿತ್ತು. ಅವರ ನಮ್ಮೊಂದಿಗಿಲ್ಲ. ಅವರನ್ನು ಶಾಂತಿಯುತವಾಗಿ ಕಳುಹಿಸಿಕೊಡಬೇಕಿದೆ. ಅಭಿಮಾನಿಗಳಲ್ಲಿ ಅಪಾರ ಗೌರವ ಹೊಂದಿರುವ ಅವರಿಗೆ ನಿಮ್ಮ ಸಹಕಾರ ಅಗತ್ಯ. ಯಾರೂ ಕೂಡಾ ಗಲಾಟೆ ಮಾಡದೆ, ಅವರನ್ನು ಶಾಂತಿಯಿಂದ ಕಳುಹಿಕೊಡೋಣ ಎಂದು ವಿಷ್ಣುವರ್ಧನ್ ಪತ್ನಿ ಭಾರತಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕನ್ನಡ ಚಿತ್ರರಂಗದ ಜನನಾಯಕ ವಿಷ್ಣುವರ್ಧನ್ ಅವರ ಅಕಾಲಿಕ ಮರಣವನ್ನು ಭರಿಸಲು ಅಸಾಧ್ಯ. ಕನ್ನಡ ಚಿತ್ರರಂಗದ ಅನೇಕ ಗಣ್ಯರು ಸಾಹಸಸಿಂಹನ ಅನಿರೀಕ್ಷಿತ ಸಾವಿಗೆ ಕಂಬನಿ ಮಿಡಿಯುತ್ತಿದೆ. 200 ಚಿತ್ರಗಳಲ್ಲಿ ಅಭಿನಯಿಸಿ ಕನ್ನಡದ ಅಮರ ಕಲಾವಿದನಾಗಿರುವ ವಿಷ್ಣುವರ್ಧನ್ 59ನೇ ವರ್ಷದಲ್ಲಿ ಸಾವಿಗೆ ಶರಣಾಗಿರುವುದು ವಿಪರ್ಯಾಸದ ಸಂಗತಿ.