Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುನಾಮಿ: ರಾಜ್-ವಿಷ್ಣು ನೆರವು
ಬೆಂಗಳೂರು : ಸುನಾಮಿ ಸಂತ್ರಸ್ತರ ನೆರವಿಗಾಗಿ ರಾಜ್ಯವೂ ಸೇರಿದಂತೆ ದೇಶದ ವಿವಿಧೆಡೆಗಳಿಂದ ನೆರವಿನ ಮಹಾಪೂರ ಹರಿದುಬರುತ್ತಿದ್ದು , ಕನ್ನಡ ಚಿತ್ರೋದ್ಯಮ ಕೂಡ ಸಂತ್ರಸ್ತರ ನೆರವಿಗೆ ಕೈಜೋಡಿಸಿದೆ.
ವರನಟ ಡಾ.ರಾಜ್ಕುಮಾರ್ 5 ಲಕ್ಷ ರುಪಾಯಿಗಳ ನೆರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. ಮತ್ತೊಬ್ಬ ಖ್ಯಾತ ನಟ ವಿಷ್ಣುವರ್ಧನ್ ಸ್ನೇಹಲೋಕ ಬಳಗದ ಪರವಾಗಿ 1 ಲಕ್ಷ ರುಪಾಯಿಗಳ ನೆರವನ್ನು ಇಂಡಿಯನ್ ಎಕ್ಸ್ಪ್ರೆಸ್ ಸಮೂಹದ ನಿಧಿಗೆ ನೀಡಿದ್ದಾರೆ.
ಬೆಂಗಳೂರಿನ ಟೆನ್ನಿಸ್ ಕ್ಲಬ್ನಲ್ಲಿ ಮುಖ್ಯಮಂತ್ರಿ ಧರ್ಮಸಿಂಗ್ ಅವರಿಗೆ ಡಿ.29ರ ಬುಧವಾರ ರಾಜ್ ದಂಪತಿಗಳು 5 ಲಕ್ಷ ರುಪಾಯಿಗಳ ಚೆಕ್ ನೀಡಿದರು. ವಿಷ್ಣುವರ್ಧನ್ ಅವರು ಇಂಡಿಯನ್ ಎಕ್ಸ್ಪ್ರೆಸ್ನ ಅಜಯ್ ಮೆನನ್ ಅವರಿಗೆ 1 ಲಕ್ಷ ರುಪಾಯಿ ಚೆಕ್ ನೀಡಿದರು. ಇದೇ ಸಂದರ್ಭದಲ್ಲಿ ಅಮೆರಿಕಾ ನಿವಾಸಿ ನಟರಾಜ್ 5 ಲಕ್ಷ ರುಪಾಯಿಗಳ ನೆರವು ನೀಡಿದರು.
ರಾಜ್ಯದ ಟೆಲಿವಿಷನ್ ಕಲಾವಿದರು ತಂತ್ರಜ್ಞರು ಸುನಾಮಿ ಸಂತ್ರಸ್ತರಿಗಾಗಿ ನಿಧಿ ಸಂಗ್ರಹಿಸುತ್ತಿದೆ. ಬೆಂಗಳೂರು ಹಾಗೂ ರಾಜ್ಯದ ವಿವಿಧೆಡೆಗಳಲ್ಲಿ ದೇಣಿಗೆ ಸಂಗ್ರಹಿಸಲು ಕಿರುತೆರೆ ತಂತ್ರಜ್ಞರು-ಕಲಾವಿದರು ಉದ್ದೇಶಿಸಿದ್ದಾರೆ.(ಇನ್ಫೋ ವಾರ್ತೆ)