Don't Miss!
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೇಜಿಸ್ಟಾರ್ ರವಿಚಂದ್ರನ್ ಎಲ್ಲಿ ಹೋದರು?
ಈ ಬಾರಿ ಕ್ರೇಜಿಸ್ಟಾರ್ ರವಿಚಂದ್ರ ತಮ್ಮ ಅಭಿಮಾನಿಗಳಿಗೆ ತೀವ್ರ ನಿರಾಶೆ ಉಂಟು ಮಾಡಿದ್ದಾರೆ. ಅವರ ಹುಟ್ಟುಹಬ್ಬ ಎಂದು ಅವರ ಅಭಿಮಾನಿಗಳು ಡಾ.ರಾಜ್ ಕುಮಾರ್ ರಸ್ತೆಯ ಅವರ ಮನೆಗೆ ಹೋದರೆ ಅವರ ಸುಳಿವಿಲ್ಲ. ಎಲ್ಲಿ ಹೋದರು ರವಿಚಂದ್ರನ್.
ಈ ಬಾರಿ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಮೊದಲೆ ರವಿಚಂದ್ರನ್ ತನ್ನ ಅಭಿಮಾನಿಗಳಿಗೆ ತಿಳಿಸಿದ್ದರು. ಅವರ ಮಹತ್ವಾಕಾಂಕ್ಷಿ ಚಿತ್ರ 'ಮಂಜಿನಹನಿ' ಚಿತ್ರ ಬಿಡುಗಡೆ ದಿನವೇ ನನ್ನ ಹುಟ್ಟುಹಬ್ಬ ಎಂದಿದ್ದರು. ದಯವಿಟ್ಟು ಕೇಕು, ಹೂವು, ಹಣ್ಣು ತರಬೇಡಿ ಎಂದು ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದರು.
ಅಭಿಮಾನಿಗಳೇನೋ ರವಿ ಮನೆ ಮುಂದೆ ಜಮಾಯಿಸಿದರು. ಆದರೆ ಅವರು ಮಾತ್ರ ಕಾರ್ಯನಿಮಿತ್ತ ಗೋವಾದಲ್ಲಿದ್ದರು. 'ಮಂಜಿನ ಹನಿ' ಬಿಡುಗಡೆ ದಿನ ಡಬ್ಬಲ್ ಹುಟ್ಟುಹಬ್ಬ ಆಚರಿಸಿಕೊಳ್ಳಲು ರವಿ ಕಾತುರದಿಂದಿದ್ದಾರೆ.
ರವಿಚಂದ್ರನ್ ಅವರ ಆತ್ಮೀಯ ಗೆಳೆಯ ಹಂಸಲೇಖ ಅವರು ಹುಟ್ಟುಹಬ್ಬ ಶುಭಾಶಯ ಕೋರಿದ್ದಾರೆ. ಹಂಸಲೇಖ ಅವರಿಗೆ ರವಿಚಂದ್ರನ್ ಯಾವಾಗಲು ಕನಸುಗಾರ. ಸದಾ ಕನಸಿನಲ್ಲಿ ಮುಳುಗಿರುವ ರವಿ ತಮ್ಮ ಚಿತ್ರದ ಮೂಲಕ ಏನಾದರೂ ಕೊಡಲಿ ಎಂದಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)