Don't Miss!
- News ಲೋಕಸಭಾ ಚುನಾವಣೆಯಲ್ಲಿ ಕೊಡಗಿನಲ್ಲಿ ಮತ್ತೆ ‘ಕೈ’ ಕಮಾಲ್?: ಒಂದಷ್ಟು ನಾಯಕರು ಮೌನವಾಗಿದ್ದೇಕೆ?
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಐಟಿ ದಾಳಿ ಹಿನ್ನೆಲೆ; ಬೆಂಗಳೂರಿಗೆ ಮರಳಿದ ಅನುಷ್ಕಾ ಶೆಟ್ಟಿ
ಆದಾಯ ತೆರಿಗೆ ದಾಳಿ ಬಳಿಕ ಬೆಂಗಳೂರು ಬೆಡಗಿ ಅನುಷ್ಕಾ ಶೆಟ್ಟಿ ತುಂಬಾ ಬೇಜಾರಾಗಿದ್ದು ತವರಿಗೆ ಮರಳಲು ಮನಸ್ಸು ಮಾಡಿದ್ದಾರೆ. ಬೆಂಗಳೂರು ಹಾಗೂ ಹೈದರಾಬಾದಿನ ಅನುಷ್ಕಾ ಅವರ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದರು. ಇದರಿಂದಬೇಜಾರಾಗಿರುವ ಆಕೆ ಭಾರವಾದ ಮನಸ್ಸನ್ನು ಕೊಂಚ ಹಗುರ ಮಾಡಿಕೊಳ್ಳಲು ಬೆಂಗಳೂರಿಗೆ ಮರಳಿದ್ದಾರೆ.
ಐಟಿ ದಾಳಿ ವೇಳೆ ಆದಾಯ ತೆರಿಗೆ ಅಧಿಕಾರಿಗಳು ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಮೂಲಗಳ ಪ್ರಕಾರ, ಚಿನ್ನಾಭರಣ ಸೇರಿದಂತೆ ದಾಖಲೆ ಇಲ್ಲದ ಹಣವನ್ನು ವಶಕ್ಕೆ ತೆಗೆದುಕೊಂಡಿದ್ದರು. ಇತ್ತೀಚೆಗೆ ಆಕೆ ವಿಶಾಖಪಟ್ಟಣಂನಲ್ಲಿ ಪ್ಲಾಟ್ ಒಂದನ್ನು ಖರೀದಿಸಿದ್ದರು. ಅದರ ಬಗ್ಗೆಯೂ ಆದಾಯ ತೆರಿಗೆ ಅಧಿಕಾರಿಗಳು ನಾನಾ ಪ್ರಶ್ನೆ ಕೇಳಿ ಅನುಷ್ಕಾ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.
ಇಷ್ಟೆಲ್ಲಾ ತರಲೆ ತಾಪತ್ರಯಗಳಿಂದ ಆಕೆಯ ಮನಸ್ಸು ಈಗ ತುಂಬಾ ಭಾರವಾಗಿದೆಯಂತೆ. ಕೆಲ ದಿನಗಳ ಕಾಲ ಬೆಂಗಳೂರಿನ ತಂಪು ಹವೆಯಲ್ಲಿ ವಿಹರಿಸಿದರೆ ಎಲ್ಲಾ ಸರಿಹೋಗುತ್ತದೆ. ಮನಸ್ಸು ಹೂವಿನಷ್ಟು ಹಗುರವಾಗುತ್ತದೆ ಎಂದು ಆಕೆ ಹೈದರಾಬಾದ್ ಬೆಂಗಳೂರು ವಿಮಾನ ಹತ್ತಿ ಆಗಮಿಸಿದ್ದಾರೆ ಎನ್ನುತ್ತವೆ ಮೂಲಗಳು.