twitter
    For Quick Alerts
    ALLOW NOTIFICATIONS  
    For Daily Alerts

    ಚೈತ್ರದ ಪ್ರೇಮಾಂಜಲಿ ರಘುವೀರ್ ಮರಳಿ ಗೂಡಿಗೆ

    By Staff
    |

    'ಚೈತ್ರದ ಪ್ರೇಮಾಂಜಲಿ' ಖ್ಯಾತಿಯ ರಘುವೀರ್ ವಾಪಸ್ಸಾಗಿದ್ದಾರೆ.ಕಳೆದ ಎಂಟು ವರ್ಷಗಳಿಂದ ಅವರು ಕನ್ನಡ ಚಿತ್ರರಂಗದಿಂದ ಕಾಣೆಯಾಗಿದ್ದರು. ಈಗ 'ಯಾರಿಗೋಸ್ಕರ ಈ ಪ್ರೀತಿ' ಎಂಬ ಚಿತ್ರವನ್ನು ಕೈಗೆತ್ತಿಕೊಂಡು ಅವರೇ ನಾಯಕನಾಗಿ ನಟಿಸುತ್ತಿದ್ದಾರೆ.

    ಎಸ್.ರಾಜ ಎನ್ನುವವರು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಮೈಸೂರಿನ ರವಿಕುಮಾರ್ ನಿರ್ಮಾಪಕರು. ರಘುವೀರ್ ನಟಿಸಿದ ಮೊದಲ ಚಿತ್ರ ಚೈತ್ರದ ಪ್ರೇಮಾಂಜಲಿ. ಆ ಚಿತ್ರ ಸೆಟ್ಟೇರಿದ ದಿನದಂದೇ ಅಂದರೆ ಏಪ್ರಿಲ್ ನಾಲ್ಕರಂದು 'ಯಾರಿಗೋಸ್ಕರ ಈ ಪ್ರೀತಿ' ಚಿತ್ರವೂ ಸೆಟ್ಟೇರಲಿದೆ.

    ಚಿತ್ರದ ತಾರಾಗಣದಲ್ಲಿ ರಾಮಕೃಷ್ಣ, ವಿಜಯಕಾಶಿ, ಶ್ರೀಲಲಿತಾ ಮುಂತಾದವರು ಇದ್ದಾರೆ. ರಾಮ್ ಕುಮಾರ್ ಎಂಬ ಹೊಸಬರು ಈ ಚಿತ್ರಕ್ಕೆ ಸಂಗೀತ ಸಂಯೋಜಿಸಲಿದ್ದಾರೆ. ಪಿಕೆಎಚ್ ದಾಸ್ ಛಾಯಾಗ್ರಹಣ ಚಿತ್ರಕ್ಕಿದೆ.

    (ದಟ್ಸ್ ಕನ್ನಡ ಚಿತ್ರವಾರ್ತೆ)

    ಇದನ್ನೂ ಓದಿ
    ಗೆಜ್ಜೆ ಹಾಡಿಗೆ ಹೆಜ್ಜೆ ಹಾಕಿದ ಸುಧಾರಾಣಿ, ಅನು
    ಈ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿಲ್ಲ: ಪ್ರೇಮ್
    ಇನ್ನು ವೆಬ್ ಸೈಟ್ ನಲ್ಲಿ ಪ್ರಶಸ್ತಿ ವಿಜೇತ ಚಿತ್ರಗಳು

    Tuesday, March 31, 2009, 16:35
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X