ಕನ್ನಡ ಶಾಲೆ ಮುಚ್ಚುತ್ತಿರುವ ಬಗ್ಗೆ ಹಂಸಲೇಖ ಬೇಸರ

By Rajendra

Music Director Hamsalekha
ವಿದ್ಯಾರ್ಥಿಗಳ ಕೊರತೆಯನ್ನೇ ನೆಪ ಮಾಡಿಕೊಂಡು ಸರಕಾರಿ ಕನ್ನಡ ಪಾಠಶಾಲೆಗಳನ್ನು ಮುಚ್ಚುತ್ತಿರುವುದರ ಬಗ್ಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಗ್ಲೊಬಲ್ ಎಡ್ಯುಕೇಶನಲ್ ಸೊಸೈಟಿಯ ಪ್ರಿಯದರ್ಶಿನಿ ಡಿಇಡಿ ಕಾಲೇಜು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಸರಕಾರಿ ಕನ್ನಡ ಶಾಲೆಗಳಿಗೆ ವಿದ್ಯಾರ್ಥಿಗಳು ಯಾಕೆ ಬರುತ್ತಿಲ್ಲ ಎಂಬುದನ್ನು ಮೊದಲು ಸರ್ಕಾರ ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳನ್ನು ಆಕರ್ಷಿಸುವಂತಹ ಯೋಜನೆಗಳನ್ನು ರೂಪಿಸಬೇಕು. ಅದು ಬಿಟ್ಟು ಏಕಾಏಕಿ ಸರಕಾರಿ ಕನ್ನಡ ಪಾಠಶಾಲೆಗಳನ್ನು ಮುಚ್ಚುವುದು ಸರಿಯಾದ ಕ್ರಮವಲ್ಲ ಎಂದು ಹಂಸಲೇಖ ಕಿವಿಮಾತು ಹೇಳಿದರು.

ಕನ್ನಡ ಭಾಷೆ ಅಭಿವೃದ್ಧಿಯಾಗಬೇಕೆಂದರೆ ಸರಕಾರಿ ಕನ್ನಡ ಪಾಠಶಾಲೆಗಳ ಅವಶ್ಯಕತೆ ಇದ್ದೇ ಇದೆ. ಪ್ರತಿಭೆ ಎಂಬುದು ಒಬ್ಬರ ಸ್ವತ್ತಲ್ಲ, ಅದು ಸಾಧಕರ ಆಸ್ತಿ ಎಂದು ಅವರು ಅಭಿಪ್ರಾಯಪಟ್ಟರು. ಪ್ರತಿಭೆ ಇದ್ದರೆ ಗೌರವ ಮನ್ನಣೆಗಳು ನಮ್ಮನ್ನೇ ಹುಡುಕಿಕೊಂಡು ಬರುತ್ತದೆ ಎಂದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು. (ಎಜೆನ್ಸೀಸ್)

More from Filmibeat

English summary
Renowned music director Hamsalekha objects closure of Kannda schools in the state, while addressing in Shimoga. He stated that thousands of students would be deprived of education if these schools were closed.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X