Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಚಲನಚಿತ್ರ ಪತ್ರಿಕೋದ್ಯಮದ ಗಡ್ಡಾಫಿ : ಉಮ-50
ಅಗಾಧ ನೆನಪಿನ ಶಕ್ತಿ. ಕವಿಗಳ ಬಗ್ಗೆ ಕಡುಕೋಪ, ಸಂಗೀತದ ಬಗ್ಗೆ ಮಡುಗಟ್ಟಿದ ಪ್ರೀತಿ. ಬದುಕೇ ಇಷ್ಟು ಅನ್ನುವ ನಿರ್ಭಾವುಕತೆ. ಇನ್ನಷ್ಟು ತೀವ್ರವಾಗಿ ಬದುಕುವ ಹುಮ್ಮಸ್ಸು. ದೂರದಿಂದ ನೋಡಿದವರು ಈತ ಕಟ್ಟುನಿಟ್ಟು ಮತ್ತು ಶಿಸ್ತಿನ ಅಪಾಯಕಾರಿ ಎಂದು ಭಾವಿಸುವುದುಂಟು. ಆ ಭಾವನೆಯನ್ನು ಹೋಗಲಾಡಿಸುವುದಕ್ಕೆ ಇದುವರೆಗೂ ಯಾವ ಪ್ರಯತ್ನವನ್ನೂ ಮಾಡಿದ್ದನ್ನು ನಾನಂತೂ ನೋಡಿಲ್ಲ. ಗೊತ್ತಿಲ್ಲದ ಫೋನ್ ನಂಬರನ್ನು ಯಾವತ್ತೂ ಎತ್ತದ, ಅಹಂಕಾರಿಗಳನ್ನು, ಕವಿಗಳನ್ನು, ಕುಹಕಿಗಳನ್ನು ಸದಾ ದೂರ ಇಡುವ, ತುಂಬ ಆಪ್ತರನ್ನೂ ಒಳಕೋಣೆಗೆ ಬಿಟ್ಟುಕೊಳ್ಳದ ಈ ಗೆಳೆಯನ ಹೆಸರು ಉದಯ ಮರಕಿಣಿ.
ನೀವು ಹತ್ತಾರು ವರ್ಷಗಳಿಂದ ಕನ್ನಡಪ್ರಭದ ಓದುಗರಾಗಿದ್ದರೆ ಉದಯ ಮರಕಿಣಿಯ ಹಾಸ್ಯದ ಪಟ್ಟಿಗೆ ಖಂಡಿತ ಸಿಲುಕಿರುತ್ತೀರಿ. ಏಕತಾನತೆ, ಅವವೇ ಮಾತುಗಳ ಚರ್ವಿತ ಚರ್ವಣ, ಓಬೀರಾಯನ ಕಾಲದ ಶೈಲಿಯಿಂದ ಸಿನಿಮಾ ವಿಮರ್ಶೆಯನ್ನು ಆಚೆಗೆಳೆದು ತಂದವರು ಉದಯ್. ಹಾಗೆ ನೋಡಿದರೆ ಸಿನಿಮಾ ಪತ್ರಿಕೋದ್ಯಮದಲ್ಲಿ ಮತ್ತೊಂದು ಅಧ್ಯಾಯವನ್ನು ಆರಂಭಿಸಿದವರು ಅವರೇ. ಅಲ್ಲಿಯ ತನಕ ಕೇವಲ ವರದಿಗಾರಿಕೆ ಮಾತ್ರ ಆಗಿದ್ದ, ಸಿನಿಮಾ ರಿಪೋರ್ಟಿಂಗ್ ಉದಯ್ ಬರಹಗಳಿಂದ ಹೊಸ ಹುಮ್ಮಸ್ಸು ಪಡಕೊಂಡಿತು. ಅನೇಕ ಕಲಾವಿದರು, ನಿರ್ದೇಶಕರು ಮರಕಿಣಿ ತಮ್ಮ ಬಗ್ಗೆ ಬರೆಯಬೇಕು ಎಂದು ಹಂಬಲಿಸುತ್ತಿದ್ದರು.