Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾರದ ವಿಜಯ ಸೆನ್ಸಾರ್ ನಲ್ಲಿ ದಿಗ್ವಿಜಯ!
'ನಾರದ ವಿಜಯ' ಚಿತ್ರ ಸೆನ್ಸಾರ್ ಮಂಡಳಿಯಲ್ಲಿ ದಿಗ್ವಿಜಯ ಸಾಧಿಸಿದೆ. ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ನಾರದ ವಿಜಯವನ್ನು ಕೊಂಡಾಡಿ 'ಯು' ಅರ್ಹತಾ ಪತ್ರವನ್ನು ನೀಡಿದೆ. ಈ ಚಿತ್ರ ಶ್ರೀಘ್ರದಲ್ಲೆ ತೆರೆ ಕಾಣಲಿದೆ. ಸಿಮ್ರಾನ್ ಮೂವೀ ಮೇಕರ್ಸ್ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಿಸಲಾಗಿದೆ.
ಶಶಿಕುಮಾರ್ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದ ನಾಯಕನಾಗಿ ಸೂರ್ಯ ನಟಿಸಿದ್ದಾರೆ. ಮಧ್ಯಮ ವರ್ಗದ ಜನರ ನಿತ್ಯಜೀವನದ ಪ್ರಸಂಗಗಳನ್ನು ಆಧರಿಸಿ ನಿರ್ಮಾಣವಾಗಿರುವ ಈ ಚಿತ್ರವನ್ನು ಮಂಜು ದೈವಜ್ಞ ನಿರ್ದೇಶಿಸಿದ್ದಾರೆ.ನಿರ್ದೇಶಕರೇ 'ನಾರದ ವಿಜಯ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದಿದ್ದಾರೆ.
ರಾಜ್ಭಾಸ್ಕರ್ ಸಂಗೀತ ನೀಡಿದ್ದಾರೆ. ಶಿವಕುಮಾರ್ ಛಾಯಾಗ್ರಹಣ, ಕುಮಾರ್ ಸಂಕಲನ, ಶ್ರೀನಿವಾಸ್ ಕಲೆ ಹಾಗೂ ಅಲ್ಟಿಮೆಟ್ ಶಿವು ಸಾಹಸ ಈ ಚಿತ್ರಕ್ಕಿದ್ದು, ಶ್ರೀಪ್ರಿಯ, ಕಾವ್ಯ, ಬ್ಯಾಂಕ್ ಜನಾರ್ದನ್, ಮೋಹನ್ ಜುನೇಜಾ, ಎಂ.ಎನ್.ಲಕ್ಷ್ಮೀದೇವಿ, ಬಿರದಾರ್, ಸುನಿತಾಶೆಟ್ಟಿ, ಜ್ಯೋತಿ, ರುದ್ರಾಣಿ ಮುಂತಾದವರು ಚಿತ್ರದ ತಾರಾಬಳಗದಲಿದ್ದಾರೆ.